
ಚಿಕ್ಕಬಳ್ಳಾಪುರ: ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುವವರು ತಮ್ಮ ಜೊತೆ ಸಾಕು ಪ್ರಾಣಿಗಳನ್ನೋ, ಪಕ್ಷಿಗಳನ್ನೋ ಕರೆದೊಯ್ಯಬೇಕಾದರೆ ಟಿಕೆಟ್ ಪಡೆಯಲೇಬೇಕೆಂಬುದು ಸಂಸ್ಥೆ ನಿಯಮ.
ಆದರೆ ಇದನ್ನರಿಯದೆ ವ್ಯಕ್ತಿಯೊಬ್ಬರು ಎರಡು ಕೋಳಿಗಳೊಂದಿಗೆ ಪ್ರಯಾಣಿಸಿರುವ ಘಟನೆ ಗೌರಿಬಿದನೂರಿನಲ್ಲಿ ಭಾನುವಾರ ನಡೆದಿದ್ದು, ಕಂಡಕ್ಟರ್ ನಿಯಮಪ್ರಕಾರ ಕೋಳಿಗೂ ಟಿಕೆಟ್ ವಿಧಿಸಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಗೌರಿಬಿದನೂರು ತಾಲೂಕಿನ ಪೆದ್ದೇನಹಳ್ಳಿಯ ಶ್ರೀನಿವಾಸ್ ಎಂಬವರು ಭಾನುವಾರ ಸಂತೆಯಲ್ಲಿ 2 ನಾಟಿ ಕೋಳಿ ಖರೀದಿಸಿ ಕೆಎಸ್ಆರ್ಟಿಸಿ ಬಸ್ ಹತ್ತಿದ್ದಾರೆ. ಈ ವೇಳೆ ಕಂಡಕ್ಟರ್ ಬಂದು ಕೋಳಿಗೂ ಅರ್ಧ ಟಿಕೆಟ್ ಖರೀದಿಸಲೇಬೇಕು ಎಂದು ಎಚ್ಚರಿಸಿದ್ದಾರೆ. ಕುರಿ, ನಾಯಿಗಳಾದರೆ ಪ್ರಯಾಣಿಕರ ಜಾಗ ಆಕ್ರಮಿಸಿಕೊಳ್ಳುವ ಕಾರಣ ಟಿಕೆಟ್ ನೀಡುವುದರಲ್ಲಿ ತಪ್ಪಿಲ್ಲ, ಆದರೆ ಕೋಳಿಗೂ
ಟಿಕೆಟ್ ನೀಡುವುದು ಯಾವ ಕಾನೂನು ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಕಂಡಕ್ಟರ್ ನಿಯಮ ಇರುವುದೇ ಹೀಗೆ ಎಂದು ಖಡಕ್ ಆಗಿ ಹೇಳಿದ ಬಳಿಕ ಅನಿವಾರ್ಯವಾಗಿ ಟಿಕೆಟ್ಗಳನ್ನು ಪಡೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.