ಕೆರೆಗೆ ನೀರು ಹರಿಸಿ ಎಂದು ಸಿಎಂಗೆ ರಕ್ತದಲ್ಲಿ ರೈತರ ಪತ್ರ

Published : Aug 27, 2018, 10:14 AM ISTUpdated : Sep 09, 2018, 10:17 PM IST
ಕೆರೆಗೆ ನೀರು ಹರಿಸಿ ಎಂದು ಸಿಎಂಗೆ ರಕ್ತದಲ್ಲಿ ರೈತರ ಪತ್ರ

ಸಾರಾಂಶ

ಕೆರೆಗೆ ಹೇಮಾವತಿ ನೀರು ಹರಿಸಿ ತಮ್ಮನ್ನು ನೇಣು ಕುಣಿಕೆಯಿಂದ ಪಾರು ಮಾಡಿ ಎಂದು ರೈತರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. 

ತುಮಕೂರು: ಕಳೆದ ತಿಂಗಳು ಹಾಸನ ಜಿಲ್ಲೆಯ ಬಾಗೂರು ನವಿಲೆ ಕಂಬಾಳ ಗ್ರಾಮಸ್ಥರು ಕೆರೆಗಳಿಗೆ ಹೇಮಾವತಿ ನೀರು ತುಂಬಿಸುವಂತೆ ಮುಖ್ಯಮಂತ್ರಿಗಳಿಗೆ ರಕ್ತದಲ್ಲಿ ಪತ್ರಬರೆದಿದ್ದರು. ಇದೀಗ ಶಿರಾ ತಾಲೂಕು ಮದಲೂರು ಕೆರೆಗೆ ಹೇಮಾವತಿ ನೀರು ಹರಿಸಿ ತಮ್ಮನ್ನು ನೇಣು ಕುಣಿಕೆಯಿಂದ ಪಾರು ಮಾಡಿ ಎಂದು ಅಲ್ಲಿಯ ಗ್ರಾಮಸ್ಥರು ಮುಖ್ಯಮಂತ್ರಿಗಳಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಕಳ್ಳಂಬೆಳ್ಳ ಗ್ರಾಮದ ಕೆರೆಗೆ ಹೇಮಾವತಿ ನೀರು ಹರಿಸಿದರೆ ಮದಲೂರು ಕೆರೆಗೆ ಹರಿಸುವ ಮಾರ್ಗದಲ್ಲಿಯೂ ಸುಮಾರು 11 ಕೆರೆಗಳು ತುಂಬಲಿವೆ. ಮದಲೂರು ಕೆರೆ ಸುತ್ತಮುತ್ತ ಇರುವ ಕಸಬಾ ಹೋಬಳಿ, ಹುಲಿಕುಂಟೆ, ದಿಡಗನಹಳ್ಳಿ ಅರೆಹಳ್ಳಿ, ಹೊನ್ನಗೊಂಡನಹಳ್ಳಿ, ಕೊಟ್ಟ, ಪಟ್ಟನಾಯಕನಹಳ್ಳಿಯ ಪ್ರದೇಶದಲ್ಲಿಯೂ ಅಂತರ್ಜಲ ಅಭಿವೃದ್ಧಿಯಾಗಲಿದ್ದು, ಕೂಡಲೇ ಹೇಮಾವತಿ ನೀರನ್ನು ಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಭಾನುವಾರ ಮದಲೂರು ಕೆರೆ ಅಂಗಳದಲ್ಲಿ ಸೇರಿದ ರೈತರು, ಗ್ರಾಮದ ಜನ್ಮಭೂಮಿ ರಕ್ಷಣಾಪಡೆ ನೇತೃತ್ವದಲ್ಲಿ ಎಲ್ಲರ ರಕ್ತ ಸಂಗ್ರಹಿಸಿ ಪತ್ರ ಬರೆದಿದ್ದು, ರಕ್ತದಲ್ಲಿಯೇ ಹಸ್ತಾಕ್ಷರ ಹಾಕಿ, ಹೆಬ್ಬೆಟ್ಟಿನ ಸಹಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪೊಲೀಸ್‌ ಚೆಕಿಂಗ್‌ ವೇಳೆ ಹೋಟೆಲ್‌ ಬಾಲ್ಕನಿಯಿಂದ ಹಾರಿದ ಬೆಂಗಳೂರು ಮಹಿಳೆ, ಸ್ಥಿತಿ ಗಂಭೀರ!
'ಮಹಿಳೆಯರು ಇರೋದು ಗಂಡನ ಜೊತೆ ಮಲಗೋಕೆ ಮಾತ್ರ..' ವಿಜಯೋತ್ಸವ ಭಾಷಣದಲ್ಲಿ ಸಿಪಿಎಂ ನಾಯಕನ ವಿವಾದಿತ ಮಾತು