
ಮೊರೇನಾ(ಅ.05): ಮೋದಿಯ 56 ಇಂಚಿನ ಎದೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಯ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್’ನ ಹಿರಿಯ ಮುಖಂಡ ಜೋತಿರಾಧಿತ್ಯ ಸಿಂಧಿಯಾ, ಪ್ತಿದಿನ ಕಷ್ಟಪಟ್ಟು ದುಡಿಯುವ ರೈತರಿಗೆ 56 ಇಂಚಿನ ಎದೆಯಿರುತ್ತದೆಯೇ ಹೊರತು ಮೋದಿಗಲ್ಲ ಎಂದಿದ್ದಾರೆ.
ಅಂಬಾನಗರದಲ್ಲಿ ರೈತರ ಸಮಾವೇಶದಲ್ಲಿ ಮಾತನಾಡಿದ ಸಿಂಧಿಯಾ, ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದಲ್ಲಿ ರೈತರು ಕರಾಳ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಅವರ ಎದೆ 56 ಇಂಚು ಇದೆಯೇ ಹೊರತು ಮೋದಿಯದಲ್ಲ ಎಂದಿದ್ದಾರೆ.
ರೈತರ ಸಮಸ್ಯೆ ಕುರಿತಂತೆ ವಿಶೇಷ ಅಧಿವೇಶನ ನಡೆಸಿದರೂ, ರಾಜ್ಯ ಸರ್ಕಾರ ಕಳೆದ ಮೂರು ವರ್ಷಗಳಿಂದಲೂ ರೈತರಿಗೆ ಪರಿಹಾರ ಒದಗಿಸಲು ವಿಫಲವಾಗಿದೆ. ರೈತರಿಗೆ ಸರಿಯಾಗಿ ವಿದ್ಯುತ್, ಗೊಬ್ಬರಗಳನ್ನು ಸರಿಯಾಗಿ ಪೂರೈಕೆ ಮಾಡುತ್ತಿಲ್ಲ ಎಂದು ಆರೋಪಿಸಿದರು.
ದೇಶಕ್ಕೆ ಆಹಾರ ಒದಗಿಸುವ ರೈತರು 56 ಇಂಚಿನ ಎದೆ ಹೊಂದಿದ್ದಾರೆ ಎನ್ನಲು ಅರ್ಹರಾಗಿದ್ದಾರೆ. ಮೋದಿ ಬರಿ ಡಾಟಾ ಬಗ್ಗೆ ಮಾತನಾಡುತ್ತಾರೆಯೇ ಹೊರತು ಆಟ(ಗೋಧಿ ಹಿಟ್ಟು) ಬಗ್ಗೆ ಮಾತನಾಡುತ್ತಿಲ್ಲ. ಇಡೀ ದೇಶವೇ ಒಳ್ಳೆಯ ದಿನಗಳು ಎಲ್ಲಿವೆ ಎಂದು ಪ್ರಶ್ನಿಸುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.