ಮುಂಬೈ (ಮೇ.04) : ಕೆಂದ್ರ ಸರ್ಕಾರದ ಮಹಾತ್ವಾಕಾಂಕ್ಷೆ ಯೊಜನೆಯಾಗಿರುವ ಬುಲೆಟ್ ಟ್ರೈನ್ ಹಾಗೂ ಎಕ್ಸ್ಪ್ರೆಸ್ ವೇ ಯೋಜನೆಗೆ ಆರಂಭಿಕ ವಿಘ್ನ ಎದುರಾಗಿದೆ.
ಯೋಜನೆಗೆ ಸಾವಿರಾರು ಎಕರೆ ಕೃಷಿ ಭೂಮಿ ಹಾಗೂ ಮನೆ-ಮಠಗಳನ್ನು ಸ್ವಾಧೀನ ಪಡಿಸುವುದನ್ನು ವಿರೋಧಿಸಿ, ಮಹಾರಾಷ್ಟ್ರದ ಥಾನೆ- ಪಾಲ್ಘಾರ್ ಜಿಲ್ಲೆಯ ಸುಮಾರು 50 ಸಾವಿರ ರೈತರು ಗುರುವಾರ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ಆ ಯೋಜನೆಗಳಿಂದ ಆದಿವಾಸಿಗಳಿಗೆ, ಗ್ರಾಮಸ್ಥರಿಗೆ ಮತ್ತು ಕೃಷಿಕರಿಗೆ ಯಾವುದೇ ಪ್ರಯೋಜನವಿಲ್ಲ, ಯಾವುದೇ ಕಾರಣಕ್ಕೂ ಕೃಷಿ ಭೂಮಿಯನ್ನು ಬಿಟ್ಟುಕೊಡುವುದಿಲ್ಲವೆಂದು ರೈತರು ಎಚ್ಚರಿಸಿದ್ದಾರೆ.
ಮುಂಬೈ- ಅಹಮದಾಬಾದ್ ಬುಲೆಟ್ ಟ್ರೈನ್ ಹಾಗೂ ಮುಂಬೈ- ವಡೋದರಾ ಎಕ್ಸ್ಪ್ರೆಸ್ ವೇ ಯೋಜನೆಗಳು ಖಾಸಗೀಕರಣದ ಪ್ರಯತ್ನವಾಗಿದೆಯೆಂದು, ಪ್ರತಿಭಟನೆಯಲ್ಲಿ ಸೇರಿದ್ದ ಸುಮಾರು 60 ಗ್ರಾಮಗಳ ರೈತರು ಆರೋಪಿಸಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದ ರೈತರು, ಮುಂದಿನ ಪಾಲ್ಘಾರ್ ಉಪ-ಚುನಾವಣೆಯಲ್ಲಿ ಬಿಜೆಪಿಯುನ್ನು ಸೋಲಿಸುವುದಾಗಿ ಎಚ್ಚರಿಸಿದ್ದಾರೆ.