
ಹಾವೇರಿ (ಅ.19): ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಬೆನಕನಕೊಂಡ ಗ್ರಾಮ ಪ್ರತಿ ವರ್ಷ ಬರಗಾಲದಿಂದಾಗಿ ಹನಿ ನೀರಿಗೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು.
ಆದರೆ ಈ ವರ್ಷ ರೈತರು ನೀರಿನ ಸಮಸ್ಯೆ ದೂರ ಮಾಡಲು ಪಣತೊಟ್ಟು ಗ್ರಾಮದ ರೈತರೆಲ್ಲ ಸೇರಿ ಸುಮಾರು 5 ಲಕ್ಷ ರೂಪಾಯಿ ಸಂಗ್ರಹ ಮಾಡಿದ್ದಾರೆ.ಆ ನಂತರ ಕಾಲುವೆಯಲ್ಲಿ ಹರಿಯುವ ನೀರನ್ನು ಪೈಪ್ಗಳ ಮೂಲಕ ಕೆರೆ ತುಂಬಿಸಿದ್ದಾರೆ.
ಕೆರೆ ತುಂಬಿದ್ದರಿಂದ ಗ್ರಾಮದ ಜಾನುವಾರುಗಳಿಗೆ ನೀರು ಸಿಗುವುದರ ಜೊತೆಗೆ ಅಂತರ್ಜಲ ಹೆಚ್ಚಾಗಿದ್ದು, ಬೋರವೆಲ್ ಗಳಲ್ಲಿ ನೀರು ಬರತೊಡಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.