
ಬೆಂಗಳೂರು (ಜ.21): ಬರ ಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರ ಕೊಟ್ಟಿತಾ? ಇಲ್ಲವಾ? ಇದು ದೊಡ್ಡ ಯಕ್ಷಪ್ರಶ್ನೆಯಾಗಿ ಕಾಡುತ್ತಾ ಇದೆ.
ಜನವರಿ 19ರಂದು ಸಿಎಂ ಸಿದ್ದರಾಮಯ್ಯನವರ ಅಧಿಕೃತ ಟ್ವಿಟರ್'ನಲ್ಲಿ ಕೇಂದ್ರ ಸರ್ಕಾರ ರಾಜ್ಯದ ಬರ ಪರಿಹಾರಕ್ಕಾಗಿ 1782 ಕೋಟಿ ರೂ. ಘೋಷಿಸಿದ್ದರೂ, ಇದುವರೆಗೆ ಅನುದಾನ ಬಿಡುಗಡೆ ಮಾಡಿಲ್ಲ. ಕೇಂದ್ರದ ಜೊತೆ ನಾವು ಸತತ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದ್ದಾರೆ.
ಆದರೆ, ಇತ್ತ ಕೇಂದ್ರ ಸಚಿವ ಅನಂತ ಕುಮಾರ್, ರಾಜ್ಯ ಸರ್ಕಾರಕ್ಕೆ ಕೇಂದ್ರ ಪರಿಹಾರ ಕೊಟ್ಟಿದೆ. ರಾಜ್ಯ ಸರ್ಕಾರವೇ ಕೆಲಸ ಮಾಡುತ್ತಿಲ್ಲ ಎನ್ನುತ್ತಿದ್ದಾರೆ.
ಆದರೆ, ಇದುವರೆಗೆ ಕೇಂದ್ರದ ಬರ ಪರಿಹಾರ ರಾಜ್ಯವನ್ನು ತಲುಪಿತಾ? ಇಲ್ಲವಾ? ಎಂದು ಸ್ಪಷ್ಟವಾಗುತ್ತಿಲ್ಲ. ಎರಡೂ ಪಕ್ಷಗಳ ರಾಜಕೀಯದಲ್ಲಿ ನರಳುತ್ತಿರುವುದು ರಾಜ್ಯದ ರೈತರು ಎನ್ನುವುದು ಮಾತ್ರ ವಿಪರ್ಯಾಸ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.