
ನವದೆಹಲಿ(ಆ.06): ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದತಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕಾಶ್ಮೀರಿ ರಾಜಕೀಯ ನಾಯಕರನ್ನು ಕೇಂದ್ರ ಸರ್ಕಾರ ಬಂಧಿಸಲಾಗಿತ್ತು.
ಈ ಕುರಿತು ಆಕ್ಷೇಪ ವ್ಯಕ್ತಪಡಿಸಿದ ವಿಪಕ್ಷಗಳು, ಕಾಶ್ಮೀರ ಕುರಿತು ಚರ್ಚೆ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಹಿರಿಯ ಕಾಶ್ಮೀರಿ ನಾಯಕ ಫಾರೂಖ್ ಅಬ್ದುಲ್ಲಾ ಎಲ್ಲಿ ಎಂದು ಪ್ರಶ್ನಿಸಿದವು.
ಇದಕ್ಕೆ ಉತ್ತರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಫಾರೂಖ್ ಅಬ್ದುಲ್ಲಾ ಅವರನ್ನು ಸರ್ಕಾರ ಬಂಧಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ವೇಳೆ ಗೃಹ ಸಚಿವರ ಹೇಳಿಕೆಯನ್ನು ಖಂಡಿಸಿರುವ ಫಾರೂಖ್ ಅಬ್ದುಲ್ಲಾ, ಅಮಿತ್ ಶಾ ಸುಳ್ಳು ಹೇಳುತ್ತಿದ್ದು ನಿನ್ನೆ ರಾತ್ರಿಯಿಂದ ತಮ್ಮನ್ನು ಗೃಹ ಬಂಧನದಲ್ಲಿರಿಸಲಾಗಿದೆ ಎಂದು ಗುಡುಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.