
ಶ್ರೀನಗರ(ಏ.15): ಇತ್ತೀಚೆಗಷ್ಟೇ ಶ್ರೀನಗರ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಭರ್ಜರಿ ಜಯ ಸಾಧಿಸಿದ್ದಾರೆ.
ಇಂದು ನಡೆದ ಮತ ಎಣಿಕೆಯಲ್ಲಿ ಫಾರೂಕ್ ಅಬ್ದುಲ್ಲಾ ಅವರು ಆಡಳಿತರೂಢ ಪಿಡಿಪಿ ಅಭ್ಯರ್ಥಿ ನಜೀರ್ ಖಾನ್ ಅವರನ್ನು 10,700 ಮತಗಳ ಅಂತರಗಳಿಂದ ಮಣಿಸಿದ್ದಾರೆ. ಈ ಗೆಲುವಿನ ಮೂಲಕ ಫಾರೂಕ್ ಅಬ್ದುಲ್ಲಾ ಮೂರನೇ ಬಾರಿಗೆ ಸಂಸತ್ತಿಗೆ ಪ್ರವೇಶ ಪಡೆದಿದ್ದಾರೆ. ಈ ಮೊದಲು 1980 ಹಾಗೂ 2009ರಲ್ಲಿ ಸಂಸತ್ತು ಪ್ರವೇಶಿಸಿದ್ದರು.
ಕಳೆದ ವರ್ಷ ಹಿಜ್ಬುಲ್ ಮುಜಾಹಿದೀನ್ ಉಗ್ರ ಬುರ್ಹಾನ್ ವಾನಿ ಹತ್ಯೆ ಬಳಿಕ, ಪಿಡಿಪಿ ಪಕ್ಷದ ಸಂಸದ ತಾರೀಕ್ ಹಮೀದ್ ಕಾರ್ರಾ ತಮ್ಮ ಸಂಸದ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದರು. ಹೀಗಾಗಿ ಶ್ರೀನಗರ ಕ್ಷೇತ್ರಕ್ಕೆ ಉಪಚುನಾವಣೆ ಅನಿರೀಕ್ಷಿತವಾಗಿ ಎದುರಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.