ನೀರಿನಲ್ಲಿ ಬಿದ್ದ ಮಗು ರಕ್ಷಿಸಿ ಪ್ರಾಣ ಕಳೆದುಕೊಂಡ ತಂದೆ

Published : Apr 30, 2018, 03:26 PM ISTUpdated : Apr 30, 2018, 05:43 PM IST
ನೀರಿನಲ್ಲಿ ಬಿದ್ದ ಮಗು ರಕ್ಷಿಸಿ ಪ್ರಾಣ ಕಳೆದುಕೊಂಡ ತಂದೆ

ಸಾರಾಂಶ

ನೀರಿನಲ್ಲಿ ಮುಳುಗುತ್ತಿದ್ದ ಒಂದು ವರ್ಷದ ಮಗುವನ್ನು ರಕ್ಷಿಸಲು ಹೋಗಿ ತಂದೆಯೇ ಪ್ರಾಣ ಕಳೆದುಕೊಂಡ ಘಟನೆ  ಮಂಡ್ಯದ ಭೀಮೇಶ್ವರ ಗ್ರಾಮದಲ್ಲಿ ನಡೆದಿದೆ. ಈಜು ಬಾರದೇ ನೀರಿಗಿಳಿದ ಕಾರಣದಿಂದ ಈ ಅವಘಡ ಸಂಭವಿಸಿದೆ.  

ಮಂಡ್ಯ :  ನೀರಿನಲ್ಲಿ ಮುಳುಗುತ್ತಿದ್ದ ಒಂದು ವರ್ಷದ ಮಗುವನ್ನು ರಕ್ಷಿಸಲು ಹೋಗಿ ತಂದೆಯೇ ಪ್ರಾಣ ಕಳೆದುಕೊಂಡ ಘಟನೆ  ಮಂಡ್ಯದ ಭೀಮೇಶ್ವರ ಗ್ರಾಮದಲ್ಲಿ ನಡೆದಿದೆ.

ಫೈರೋಜ್ ಅವರ ಪತ್ನಿ ಜಬೀನ್ ಕೆರೆಯಲ್ಲಿ ಬಟ್ಟೆ ತೊಳೆಯುವಾಗ ಜೊತೆಯಲ್ಲಿ ತೆರಳಿದ್ದ ಮಗು ಆಕಸ್ಮಿಕವಾಗಿ ನೀರಿಗೆ ಬಿದ್ದಿದೆ. ಈ ವೇಳೆ ಮಗುವನ್ನು ರಕ್ಷಿಸುವ ಸಲುವಾಗಿ ನೀರಿಗೆ ಹಾರಿದ ಫೈರೋಜ್ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ. 

ಮಗುವನ್ನು ಮೇಲಕ್ಕೆತ್ತಿದ್ದ ಫೈರೋಜ್‌ ಗೆ ಈಜು ತಿಳಿದಿರದ ಕಾರಣದಿಂದ ಮೇಲಕ್ಕೆ ಬರಲಾಗದೇ ಅಲ್ಲಿಯೇ ಮೃತಪಟ್ಟಿದ್ದಾರೆ.  ನೀರಿನಲ್ಲಿ ಮುಳುಗಿ ಅಸ್ವಸ್ಥಗೊಂಡಿದ್ದ ಮಗುವನ್ನು ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
 
ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡ ಫೈರೋಜ್ ಖಾನ್ ಶವವನ್ನು ಅಗ್ನಿಶಾಮಕ ಸಿಬ್ಬಂದಿ ಹೊರಕ್ಕೆ ತೆಗೆದಿದ್ದಾರೆ. ಮಂಡ್ಯದ ನಾಗಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೈಸೂರು ಏಕತಾ ಮಹಲ್‌ ವಿವಾದ, ಕೋರ್ಟ್ ಮೆಟ್ಟಲೇರಿದ ರಾಜಮಾತೆ ಪ್ರಮೋದಾದೇವಿ!
ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್ ಬದುಕುಳಿದಿದ್ದು ಹೇಗೆ? ವೀಡಿಯೋ