ಕೊಚ್ಚಿ ಹೋಗಿದ್ದ ಮಗನ ಶವ ಹೊರ ತೆಗೆದ ಅಪ್ಪ!

Published : Aug 13, 2019, 09:04 AM IST
ಕೊಚ್ಚಿ ಹೋಗಿದ್ದ ಮಗನ ಶವ ಹೊರ ತೆಗೆದ ಅಪ್ಪ!

ಸಾರಾಂಶ

ಕೊಚ್ಚಿ ಹೋಗಿದ್ದ ಮಗನ ಶವ ಹೊರ ತೆಗೆದ ಅಪ್ಪ| ಬೆಳಗಾವಿ ಬೈಲಹೊಂಗಲದಲ್ಲಿ ಮನಕಲಕುವ ಘಟನೆ| 

ಬೈಲಹೊಂಗಲ[ಆ.13]: ಧಾರಾಕಾರ ಮಳೆಗೆ ತುಂಬಿ ಹರಿದ ಹಳ್ಳದಲ್ಲಿ ಕೊಚ್ಚಿಹೋಗಿದ್ದ ಮಗನ ಶವವನ್ನು ತಂದೆಯೇ ಹೊರತೆಗೆದ ಮನಕಲಕುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಶನಿವಾರ ಮೇವು ತರಲು ಹೋಗಿ, ಬೆಳವಡಿ ಗ್ರಾಮದಲ್ಲಿ ತುಂಬಿ ಹರಿಯುತ್ತಿದ್ದ ಸಂಗೊಳ್ಳಿ- ಜಿಡ್ಡಿ ಹಳ್ಳವನ್ನು ದಾಟುವ ವೇಳೆ ಗ್ರಾಮದ ಸಂಗಮೇಶ ಬಸಪ್ಪ ಹುಂಬಿ(22) ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದ. ಈ ಸಂಬಂಧ ಯುವಕನ ಕುಟುಂಬಸ್ಥರು ದೊಡವಾಡ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು.

ವರುಣನ ಅಬ್ಬರಕ್ಕೆ ಕರುನಾಡು ತತ್ತರ: ಮಳೆಗೆ ಸಂಬಂಧಿಸಿದ ಎಲ್ಲಾ ಸುದ್ದಿಗಳಿಗಾಗಿ ಕ್ಲಿಕ್ಕಿಸಿ

ಭಾರೀ ಮಳೆಯಿಂದ ರಕ್ಷಣಾ ಕಾರ್ಯಕ್ಕೆ ಅಡಚಣೆಯುಂಟಾಗಿತ್ತು. ಸೋಮವಾರ ಬೆಳಗ್ಗೆ ಮೃತ ಯುವಕನ ಚಿಕ್ಕಪ್ಪ ಈರಪ್ಪ ಹೊಲದ ಕಡೆ ಹೋದ ಸಂದರ್ಭದಲ್ಲಿ, ಸಂಗಮೇಶ್‌ ಕೊಚ್ಚಿಕೊಂಡು ಹೋಗಿದ್ದ ಸ್ಥಳದಿಂದ 200 ಮೀ. ದೂರದಲ್ಲಿ ಗಿಡಗಂಟಿಯೊಳಗೆ ಆತನ ಶವ ಸಿಲುಕಿರುವುದನ್ನು ನೋಡಿದ್ದಾರೆ. ತಕ್ಷಣ ಮನೆಗೆ ದೌಡಾಯಿಸಿ, ತನ್ನ ಅಣ್ಣ ಬಸಪ್ಪನಿಗೆ ಮಾಹಿತಿ ನೀಡಿದ್ದಾನೆ. ಕೊನೆಗೆ ಶವದ ಮೇಲಿದ್ದ ಬಟ್ಟೆಯ ಆಧಾರದ ಮೇಲೆ ಆತನೇ ತಮ್ಮ ಮಗನೆಂದು ಖಚಿತ ಪಡಿಸಿಕೊಂಡ ಬಸಪ್ಪ, ಹಳ್ಳಕ್ಕೆ ಇಳಿದು ತಾವೇ ಸಾಕಿ ಬೆಳೆಸಿದ ಕೈಯಿಂದ ಮಗನ ಶವ ಹೊರ ತೆಗೆದಿದ್ದಾರೆ.

ಈ ವೇಳೆ ದಡದಲ್ಲಿ ನಿಂತಿದ್ದ ಯುವಕ ಸಂಗಮೇಶನ ತಾಯಿಯ ಆಂಕ್ರದನ ಮುಗಿಲು ಮುಟ್ಟಿದ್ದು, ಸಂಬಂಧಿಕರ ದುಃಖ ಹೇಳತೀರದಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಿಡ್ನಾಪ್ ಮಾಡಿದವರ ಸ್ಮಾರ್ಟ್‌ವಾಚ್ ಬಳಸಿ ಬಚಾವ್ ಆದ ಹೊಟೆಲ್ ಮ್ಯಾನೇಜರ್, ಕೈಹಿಡಿದ SOS
ಬೆಂಗಳೂರು ಏರ್ಪೋರ್ಟ್ ಹೊಸ ಪಿಕ್‌ಅಪ್‌, ಪಾರ್ಕಿಂಗ್ ರೂಲ್ಸ್; ಪ್ರಯಾಣಿಕರ ಸಮಸ್ಯೆ 30 ದಿನಗಳೊಳಗೆ ನಿವಾರಣೆ