
ಬಳ್ಳಾರಿ(ಸೆ.12): ಅಕ್ರಮ ಸಂಬಂಧದಿಂದ ಹುಟ್ಟಿದ ಮಗು ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಮಗುವನ್ನು ಕೊಲ್ಲಲು ಮುಂದಾಗಿದ್ದ ಘಟನೆ ಬಳ್ಳಾರಿಯ ಹೊಸಪೇಟೆಯಲ್ಲಿ ನಡೆದಿದೆ.
ದುಷ್ಕರ್ಮಿಯೊಬ್ಬ ತನ್ನ ಅಕ್ರಮ ಸಂಬಂಧದಿಂದ ಮಗುವಿಗೆ ತಂದೆಯಾಗಿದ್ದ. ಮಗುವಿನಿಂದ ತನಗೆ ತೊಂದರೆಯಾಗಬಹುದೆಂದು ತನ್ನದೇ ಮಗುವನ್ನು ಜೀವಂತ ಸಮಾಧಿ ಮಾಡಲು ಹೊರಟಿದ್ದ. ಮಗು ಚೀರುವ ಧನಿ ಕೇಳಿ ಓಡಿ ಬಂದ ಆಟೋ ಚಾಲಕನೊಬ್ಬ ನವಜಾತ ಶಿಶುವನ್ನು ಸಾವಿನಿಂದ ರಕ್ಷಿಸಿದ್ದಾನೆ.
ಮಗುವನ್ನು ಜೀವಂತ ಸಮಾಧಿ ಮಾಡಲು ಮುಂದಾಗಿದ್ದ ವ್ಯಕ್ತಿಗೆ ಸಾರ್ವಜನಿಕರು ಥಳಿಸಿದ್ದಾರೆ. ಸದ್ಯ ಮಗು ಮಕ್ಕಳ ರಕ್ಷಣಾ ಘಟಕದಲ್ಲಿ ಸೇಫ್ ಆಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.