
ಚೆನ್ನೈ(ಅ.11): ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಸಿಎಂ ಜಯಲಲಿತಾ ಅವರ ಸಹಿಯನ್ನು ಫೋರ್ಜರಿ ಮಾಡುವ ಸಾಧ್ಯತೆ ಇದೆ ಎಂದು ಎಐಎಡಿಎಂಕೆ ಉಚ್ಚಾಟಿತ ರಾಜ್ಯಸಭೆ ಸದಸ್ಯೆ ಶಸಿಕಲಾ ಪುಷ್ಪಾ ರಾಜ್ಯ.ಪಾಲರಿಗೆ ಪತ್ರ ಬರೆದಿದ್ದಾರೆ.
ಜಯ ಅವರ ಆರೋಗ್ಯ ಹದಗೆಟ್ಟಿರುವ ಹಿನ್ನೆಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಪಕ್ಷದ ವರಿಷ್ಠರ ಸಹಿಯನ್ನು ನಕಲಿ ಮಾಡು ಸಾಧ್ಯತೆಯಿದೆ ಎಂದು ಗವರ್ನರ್ ಸಿ. ವಿದ್ಯಾಸಾಗರ್ ಅವರಿಗೆ ಪತ್ರ ಬರೆದಿದ್ದಾರೆ.
ಜಯಲಲಿತಾ ಅವರ ಅನುಪಸ್ಥಿತಿಯಲ್ಲಿ ಪ್ರಧಾನ ಉಪ ಕಾರ್ಯದರ್ಶಿ ರಾಜ್ಯದ ಆಡಳಿತ ಚುಕ್ಕಾಣಿಯನ್ನು ಮುಂದುವರಿಸುವಂತೆ ನಾಮ ನಿರ್ದೇಶನ ಮಾಡಲು ಮುಖ್ಯಮಂತ್ರಿ ಸುತ್ತ ಇರುವ ಕೆಲವು ವ್ಯಕ್ತಿಗಳು ಸಿಎಂ ಅವರ ಸಹಿಯನ್ನು ನಕಲು ಮಾಡುವ ಸಾಧ್ಯತೆ ಇದೆ ಎಂದು ಅವರು ಆರೋಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.