
ಶಿವಮೊಗ್ಗ[ಸೆ.3] ನದಿಗಳಿಗೆ ಪೂಜ್ಯನೀಯ ಸ್ಥಾನ ನೀಡಿಕೊಂಡು ಬಂದಿರುವುದು ನಮ್ಮ ಪರಂಪರೆ. ಜಲಾಶಯಗಳು ತುಂಬಿದಾಗ ಪೂಜೆ ಮಾಡಿ ಬಾಗಿನ ಅರ್ಪಿಸುತ್ತೇವೆ. ಇದರ ಇನ್ನೊಂದು ರೂಪ ಅಥವಾ ಆಚರಣೆಯನ್ನೇ ಗಂಗಾ ಆರತಿ ಅಥವಾ ತುಂಗಾ ಆರತಿ ಎಂದು ಕರೆಯಬಹುದು.
ಪಶ್ಚಿಮ ಘಟ್ಟದಲ್ಲಿ ಜನಿಸಿ, ಶಿವಮೊಗ್ಗದಲ್ಲಿ ಹರಿದು, ಭದ್ರೆಯೊಂದಿಗೆ ಮಿಲನಗೊಳ್ಳುವ ತುಂಗೆಯೊಂದಿಗೆ ಮಲೆನಾಡ ಜನರಿಗೆ ಭಾವನಾತ್ಮಕ ಸಂಬಂಧ. ಜುಲೈ 27ರಂದು ಸಾಮಗಾನ ತಂಡದ ವತಿಯಿಂದ ‘ಸಕ್ಕರೆಯ ತುಂಗೆಗೆ ಅಕ್ಕರೆಯ ಆರತಿ’ ಅಂದರೆ ತುಂಗಾರತಿಯನ್ನು ನೆರವೇರಿಸಲಾಗಿದೆ.
ಸಾಮಗಾನ ತಂಡ ಕೇವಲ ಆರತಿ ಮಾಡಿ ಸುಮ್ಮನಾಗಿಲ್ಲ. ಒಂದು ಸುಂದರ ಇಂಪಾದ ಗೀತೆಯನ್ನು ರಚಿಸಿ ಹಾಡಿದೆ. ಅದರ ಜತೆಗೆ ಇಡಿ ನಡಿಯ ಚಿತ್ರಣವನ್ನು ಕಣ್ಣ ಮುಂದೆ ಕಟ್ಟಿಕೊಟ್ಟಿದೆ. ಈ ಗೀತ ಚಿತ್ರವನ್ನು ಯಾವ ಕಾರಣಕ್ಕೂ ಮಿಸ್ ಮಾಡಿಕೊಳ್ಳಬೇಡಿ..
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.