
ಚಿತ್ರದುರ್ಗ (ಫೆ.03): ಪೊಲೀಸ್ ಠಾಣೆ ಎದುರೇ ಮಂಗಳಮುಖಿಯರು ಜಡೆ ಹಿಡಿದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ. ಮಂಗಳಮುಖಿಯರ ಎರಡು ಬಣದ ನಡುವೆ ಮಾರಾಮಾರಿ ನಡೆದಿದೆ. ಗಲಾಟೆ ತಡೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.
ಒಂದು ಮಂಗಳಮುಖಿಯರ ಗುಂಪು ವ್ಯಾಪ್ತಿ ಮೀರಿ ವಸೂಲಿ ಮಾಡುತ್ತಿದ್ದಾರೆ ಎಂದು ಇನ್ನೊಂದು ಗುಂಪು ಆರೋಪ ಮಾಡಿದೆ. ಎರಡೂ ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಬೆಂಗಳೂರು ಹಾಗೂ ಚಾಮರಾಜನಗರ ಮೂಲದ ಮಂಗಳಮುಖಿಯರ ತಂಡ ಚಿತ್ರದುರ್ಗಕ್ಕೆ ಲಗ್ಗೆ ಇಟ್ಟಿದೆ. ಎರಡು ಮೂರು ಬಾರಿ ಸ್ಥಳಿಯ ಮಂಗಳಮುಖಿಯರು ಎಚ್ಚರಿಕೆ ನೀಡಿದ್ರೂ ಅವರು ಲೆಕ್ಕಿಸುತ್ತಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.