ಕನ್ನಡ ಉಳಿವಿಗಾಗಿ ಹೋರಾಟ ಅನಿವಾರ್ಯ: ವಾಟಾಳ್

Published : Jul 11, 2017, 01:22 PM ISTUpdated : Apr 11, 2018, 12:44 PM IST
ಕನ್ನಡ ಉಳಿವಿಗಾಗಿ ಹೋರಾಟ ಅನಿವಾರ್ಯ: ವಾಟಾಳ್

ಸಾರಾಂಶ

ಕನ್ನಡ ಜನಶಕ್ತಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕನ್ನಡ ಚಳವಳಿಗಾರ ಸಿ. ಗುರುಶಾಂತ ಮೂರ್ತಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ಕನ್ನಡವನ್ನು ಉಳಿಸಿಕೊಳ್ಳಬೇಕಾದರೆ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಸಾರ್ವಜನಿಕರು ಸೇರಿದಂತೆ ನಾಡಿನ ಪ್ರತಿಯೊಬ್ಬರೂ ಹೋರಾಡಬೇಕಿದೆ ಎಂದು ಹೇಳಿದರು.

ಬೆಂಗಳೂರು: ತಮಿಳು, ತೆಲುಗು, ಮಲಯಾಳಂ ಸೇರಿದಂತೆ ವಿವಿಧ ಭಾಷಿಕರು ವಾಸಿಸುವ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕನ್ನಡ ರಕ್ಷಣೆ ಹೋರಾಟ ಅನಿವಾರ್ಯವಾಗಿದ್ದು, ಸದ್ಯದಲ್ಲಿಯೇ ಹೋರಾಟ ಆರಂಭಿಸುವುದಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದರು.

ಕನ್ನಡ ಜನಶಕ್ತಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕನ್ನಡ ಚಳವಳಿಗಾರ ಸಿ. ಗುರುಶಾಂತ ಮೂರ್ತಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ಕನ್ನಡವನ್ನು ಉಳಿಸಿಕೊಳ್ಳಬೇಕಾದರೆ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಸಾರ್ವಜನಿಕರು ಸೇರಿದಂತೆ ನಾಡಿನ ಪ್ರತಿಯೊಬ್ಬರೂ ಹೋರಾಡಬೇಕಿದೆ ಎಂದು ಹೇಳಿದರು.

ಕನ್ನಡ ಚಳವಳಿ ವಿಚಾರದಲ್ಲಿ ಗುರುಶಾಂತಮೂರ್ತಿ ಅವರ ಕೊಡುಗೆ ಅಪಾರವಾದದ್ದು. ನನ್ನೊಂದಿಗೆ ಅವರು ಕೈಜೋಡಿಸಿರಲಿಲ್ಲ ಎಂದರೆ, ಕನ್ನಡ ಚಳವಳಿಗಳು ಸಾಧ್ಯವಾಗುತ್ತಿರಲಿಲ್ಲ. ಗುರುಶಾಂತ ಮೂರ್ತಿ ಹಠವಾದಿ ಮತ್ತು ಸ್ವಾಭಿಮಾನಿಯಾಗಿದ್ದರು ಎಂದರು.

ಕಾರ್ಯಕ್ರಮದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು, ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ. ರಾಮೇಗೌಡ, ಕನ್ನಡ ಹೋರಾಟಗಾರರಾದ ಟಿ.ಪಿ. ಪ್ರಸನ್ನಕುಮಾರ, ಪಾಲನೇತ್ರ ಉಪಸ್ಥಿತರಿದ್ದರು.

ಕನ್ನಡಪ್ರಭ ವಾರ್ತೆ
epaper.kannadaprabha.in

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸದನದಲ್ಲಿ ಹೆಸರು ತಪ್ಪಾಗಿ ಹೇಳಿದರೆ ದಂಡ ಫಿಕ್ಸ್‌!
'ಬೆಳಗಾವಿ ಜಿಲ್ಲೆ ವಿಭಜನಗೆ ಅಂತಲೇ ಸಿಎಂ ಬಂದಿದ್ದರು' ಸಿದ್ದರಾಮಯ್ಯ ಮನಸಲ್ಲಿದ್ದ ಬಿಗ್ ಪ್ಲಾನ್ ಬಿಚ್ಚಿಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್!