
ಬೆಂಗಳೂರು: ಜೆಡಿಎಸ್ ಮುಖಂಡ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಜೀವನದ ಕಥೆಯು ಬೆಳ್ಳಿ ತೆರೆಗೆ ಬರಲಿದೆ. 20 ತಿಂಗಳ ಎಚ್'ಡಿಕೆ ಆಡಳಿತಾವಧಿಯನ್ನು ಸಿನಿಮಾ ಮೂಲಕ ತೆರೆಗೆ ತರಲು ನಿರ್ದೇಶಕ ಎಸ್.ನಾರಾಯಣ್ ತಯಾರಾಗಿದ್ದಾರೆ.
'ಭೂಮಿಪುತ್ರ' ಹೆಸರಿನಲ್ಲಿ ಬರಲಿರುವ ಈ ಸಿನಿಮಾಗೆ ಮೇ 8 ರಂದು ಅದ್ಧೂರಿ ಮುಹೂರ್ತ ನೆರವೇರಲಿದೆ. ಮೇ 27 ರಿಂದ ಚಿತ್ರೀಕರಣ ಆರಂಭಗೊಳ್ಳಲಿದ್ದು 100 ಕ್ಕೂ ಹೆಚ್ಚು ದಿನದ ಶೂಟಿಂಗ್ ಪ್ಲಾನ್ ಹಾಕಲಾಗಿದೆ. ಕುಮಾರಸ್ವಾಮಿ ಅವರ ಸಿಎಂ ಪಾತ್ರಕ್ಕೆ ಅರ್ಜುನ್ ಸರ್ಜಾ ಜೀವ ತುಂಬಲಿದ್ದಾರೆ. ಎಸ್.ನಾರಾಯಣ್ ಈ ಚಿತ್ರದ ನಿರ್ದೇಶನದ ಜೊತೆಗೆ ಸಂಗೀತವನ್ನೂ ಕೊಡುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.