
ಮುಂಬೈ, (ಡಿ.09): ಸುಮಾರು 32 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಿರ್ಮಾಪಕಿ ಪ್ರೇರಣಾ ಅರೋರ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಶನಿವಾರ ಮುಂಬೈ ಪೊಲೀಸರು ಪ್ರೇರಣಾ ಅರೋರ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಪ್ರೇರಣಾ ಅವರಿಗೆ ಡಿಸೆಂಬರ್ 10 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
KriArj ಎಂಬ ನಿರ್ಮಾಣ ಸಂಸ್ಥೆಯ ಒಡತಿಯಾಗಿರುವ ಪ್ರೇರಣಾ ಅವರು ಚಿತ್ರಕರ್ಮಿ ವಾಸು ಭಗ್ನಾನಿ ಅವರಿಗೆ 32 ಕೋಟಿ ರು ನೀಡದೆ ವಂಚಿಸಿದ್ದಾರೆ ಎಂಬ ಆರೋಪದ ಮೇಲೆ ಆರ್ಥಿಕ ಅಪರಾಧಗಳ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ರುಸ್ತುಂ, ಪ್ಯಾಡ್ಮ್ಯಾನ್, ಪರಿ, ಟಾಯ್ಲೆಟ್ ಏಕ್ ಪ್ರೇಮ್ ಕಥಾ, ಪರಮಾಣು ಮುಂತಾದ ಚಿತ್ರಗಳನ್ನು ಪ್ರೇರಣಾ ಅವರ ಸಂಸ್ಥೆ ನಿರ್ಮಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ