
ಉಡುಪಿ: ಅಯೋಧ್ಯೆ ರಾಮಮಂದಿರ ನಿರ್ಮಾಣ ಕುರಿತು ಉಡುಪಿಯಲ್ಲಿ ನವೆಂಬರ್’ನಲ್ಲಿ ನಡೆಯುವ ‘ಧರ್ಮ ಸಂಸತ್’ನಲ್ಲಿ ದೇಶದ ಸಾಧು-ಸಂತರು ಕೈಗೊಳ್ಳುವ ನಿರ್ಣಯವೇ ಅಂತಿಮವಾಗಿರುತ್ತದೆ ಎಂದು ವಿಶ್ವ ಹಿಂದೂ ಪರಿಷತ್ತಿನ ದಕ್ಷಿಣ ಕ್ಷೇತ್ರಿಯ ಕಾರ್ಯದರ್ಶಿ ಗೋಪಾಲ್ಜೀ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ. 25, 25, 26ರಂದು ಪೇಜಾವರ ಶ್ರೀಗಳ ಆತಿಥ್ಯದಲ್ಲಿ ಧರ್ಮ ಸಂಸತ್ ಸಂತರ ಸಮಾವೇಶ ನಡೆಯಲಿದೆ. ಇದರಲ್ಲಿ ದೇಶದ 2000ಕ್ಕೂ ಅಧಿಕ ಸಂತರು, ಮಠಾಧೀಶರು ಹಲವು ನಿರ್ಣಯಗಳನ್ನು ತೆಗೆದುಕೊಳ್ಳಲಿದ್ದಾರೆ. ಆ ನಿರ್ಣಯದಂತೆ ಮುಂದಿನ ಹೆಜ್ಜೆ ಇಡಲಾಗುವುದು ಎಂದರು.
ಪೇಜಾವರ ಶ್ರೀಗಳು ಕೃಷ್ಣಮಠದಲ್ಲಿ ಇಫ್ತಾರ್ ನಡೆಸುವುದಕ್ಕೆ ವಿಹಿಂಪ ಸಮ್ಮತಿಯಿಲ್ಲವೆಂದು ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.