ಶಿವಮೊಗ್ಗ, ಮಂಡ್ಯ ಲೋಕಸಭಾ ಉಪಚುನಾವಣೆಗೆ ಮೈತ್ರಿ ಕ್ಯಾಂಡಿಡೇಟ್ ಫೈನಲ್

Published : Oct 14, 2018, 11:46 AM IST
ಶಿವಮೊಗ್ಗ, ಮಂಡ್ಯ ಲೋಕಸಭಾ ಉಪಚುನಾವಣೆಗೆ ಮೈತ್ರಿ ಕ್ಯಾಂಡಿಡೇಟ್ ಫೈನಲ್

ಸಾರಾಂಶ

ಕೊನೆಗೂ ಮೈತ್ರಿ ಸರ್ಕಾರದ  ಟಿಕೆಟ್ ಹಂಚಿಕೆಯ ಗೊಂದಲಕ್ಕೆ ತೆರೆಬಿದ್ದಿದೆ. ಮಂಡ್ಯ ಹಾಗೂ ಶಿವಮೊಗ್ಗ ಲೋಕಸಭಾ ಉಪಚುನಾವನೆಗೆ ಅಭ್ಯರ್ಥಿಗಳನ್ನು ಫೈನಲ್ ಮಾಡಿದ್ದು, ಯಾರಿಗೆ ಮಣೆ ಹಾಕಾಲಾಗಿದೆ ಎನ್ನುವ ವಿವರ ಇಲ್ಲಿದೆ.    

ಬೆಂಗಳುರು, [ಅ.14]: ಕೊನೆಗೂ ಶಿವಮೊಗ್ಗ ಹಾಗೂ ಮಂಡ್ಯ ಲೋಕಸಭಾ ಉಪ ಚುನಾವಣೆಗೆ ಸಮ್ಮಿಶ್ರ ಸರ್ಕಾರದ ಕ್ಯಾಂಡಿಡೇಟ್ ಫೈನಲ್ ಆಗಿದೆ.

ಶಿವಮೊಗ್ಗ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದು,  ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ಅಶ್ವಿನಿ ಗೌಡ ಅವರನ್ನು ಕಣಕ್ಕಿಳಿಸುವುದಾಗಿ ನಿನ್ನೆ ಅಷ್ಟೇ ಜೆಡಿಎಸ್ ಪ್ರಕಟಿಸಿತ್ತು. 

ಆದ್ರೆ, ಇಂದು [ಭಾನುವಾರ] ನಡೆದ ಮಹತ್ವದ ಸಭೆಯಲ್ಲಿ ಜೆಡಿಎಸ್ ವರಿಷ್ಠರು ಬೇರೆಯವರಿಗೆ ಟಿಕೆಟ್ ಘೋಷಿಸಿದ್ದಾರೆ. ಇದ್ರಿಂದ ಅಶ್ವಿನಿ ಗೌಡ ಅವರಿಗೆ ಮುಖಭಂಗವಾಗಿದೆ.

ಅಂತಿಮವಾಗಿ ಮಂಡ್ಯ ಲೋಕಸಭಾ ಉಪಚುನಾವಣೆಗೆ ಎಲ್.ಆರ್.ಶಿವರಾಮೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಇನ್ನು ಶಿವಮೊಗ್ಗ ಲೋಕಸಭೆಗೆ ಮಾಜಿ ಶಾಸಕ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾದ್ಯಕ್ಷ  ಮಧು ಬಂಗಾರಪ್ಪ ಅವರನ್ನು ಕಣಕ್ಕಿಳಿಸಲು ಜೆಡಿಎಸ್ ಸಭೆಯಲ್ಲಿ ತೀರ್ಮಾನಿಸಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪಿಸುವುದು ಕಾಂಗ್ರೆಸ್‌ನವರಿಗೆ ಇಷ್ಟವಿಲ್ಲ: ಎಚ್.ಡಿ.ಕುಮಾರಸ್ವಾಮಿ
ರೈತರಿಗೆ ಅನುಕೂಲ ಮಾಡುವುದೇ ಗುರಿ: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್