
ಶ್ರೀನಗರ ಜೂನ್ 15: ಮಗನನ್ನು ಕೊಂದವರನ್ನು 72 ಗಂಟೆಯೊಳಗೆ ಹುಡುಕಿ ಸಾಯಿಸದಿದ್ದರೆ ತಾನೇ ಸ್ವತಃ ಹುಡುಕಿ ಹತ್ಯೆ ಮಾಡುವುದಾಗಿ ಉಗ್ರರಿಂದ ಹತ್ಯೆಗೀಡಾದ ಸೈನಿಕನ ತಂದೆ ಆವೇಶ ಹೊರಹಾಕಿದ್ದಾರೆ.
ಕೆಲ ದಿನಗಳಿಂದ ಸುಮ್ಮನಾಗಿದ್ದ ಉಗ್ರರು ಮತ್ತೆ ಜಮ್ಮು ಮತ್ತು ಕಾಶ್ಮೀರದಲ್ಲಿ ಅಟ್ಟಹಾಸ ಮೆರೆದಿದ್ದು ರಜೌರಿ ನಿವಾಸಿಯಾಗಿದ್ದ ಯೋಧ ಔರಂಗಜೇಬ್ ಎಂಬುವರನ್ನು ಅಪಹರಿಸಿ ಹತ್ಯೆ ಮಾಡಿದ್ದರು. ಗುಂಡಿನ ದಾಳಿಯಿಂದ ಸಂಪೂರ್ಣ ಛಿದ್ರಗೊಂಡ ಯೋಧನ ದೇಹ ಪುಲ್ವಾಮಾ ಜಿಲ್ಲೆಯಲ್ಲಿ ಪತ್ತೆಯಾಗಿತ್ತು.
ಪುತ್ರನಿಗೆ ಅಂತಿಮ ನಮನ ಸಲ್ಲಿಸಿದ ತಂದೆ ಸರಕಾರಕ್ಕೆ ಉಗ್ರರನ್ನು ಹತ್ಯೆ ಮಾಡದೇ ಇರಲು ಕಾರಣಗಳೇ ಇಲ್ಲ. ಕಾಶ್ಮೀರ ಪ್ರತ್ಯೇಕವಾದಿಗಳು ಪಾಕಿಸ್ತಾನದ ಪರ ಸಹಾನುಭೂತಿ ತೋರಿಸುತ್ತಿದ್ದಾರೆ. ಯಾವ ಕಾರಣಕ್ಕೂ ಉಗ್ರರನ್ನು ಸರಕಾರ ಬೆಳೆಯಲು ಬಿಡಬಾರದು. ದೇಶದ ಬಳಿ ಸಾಧ್ಯವಾದ್ದರೆ ನನ್ನ ಮಗನ ಸಾವಿಗೆ ಕಾರಣರಾದವರಿಗೆ ನಾನೇ ಅಂತ್ಯ ಕಾಣಿಸುತ್ತೇನೆ ಎಂದಿದ್ದಾರೆ. ಹಿಜ್ಬುಲ್ ಮುಜಾಹಿದ್ದೀನ್ ಉಗ್ರಟೈಗರ್ ನನ್ನು ಹತ್ಯೆಮಾಡಿದ್ದ ಸೇನಾಪಡೆಯಲ್ಲಿದ್ದ ಯೋಧನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.