
ತುಮಕೂರು (ಡಿ.11): ಸಾವಿರ ರೂಪಾಯಿ ಸಾಲ ವಾಪಸ್ ಕೊಡದೇ ಇದ್ದುದಕ್ಕೆ ವ್ಯಕ್ತಿಯೋರ್ವನ ಬೆರಳನ್ನೇ ಕತ್ತರಿಸಿದ ಅಮಾನುಷ ಘಟನೆ ತುಮಕೂರಿನಲ್ಲಿ ನಡೆದಿದೆ.
ಘಟನೆಯಲ್ಲಿ ತುಮಕೂರು ತಾಲೂಕಿನ ನಿಡುಹೊಳಲು ಗ್ರಾಮದ ನಿವಾಸಿ ಶಿವಣ್ಣ ಎನ್ನುವವರು ಬೆರಳನ್ನು ಕಳೆದುಕೊಂಡಿದ್ದಾರೆ. ಶಿವಣ್ಣ ಇದೇ ನಿಡುಹೊಳಲು ಗ್ರಾಮದ ಕುಮಾರ್ ಎನ್ನುವವರಿಂದ ಕಳೆದ 15 ದಿನಗಳ ಹಿಂದೆ ಒಂದು ಸಾವಿರ ರೂ ಸಾಲ ಪಡೆದಿದ್ದ ಎನ್ನ ಲಾಗಿದೆ. ಸಾಲ ಹಿಂದಿರುಗಿಸುಂತೆ ನಿನ್ನೆ ಕುಮಾರ್ ಶಿವಣ್ಣಗೆ ತಾಕೀತು ಮಾಡಿದ್ದಾನೆ. ದುಡ್ಡು ಹೊಂದಿಸಲು ಆಗದೇ ಇದ್ದುದರಿಂದ ಇಂದು ಸೋಮವಾರ ಮರಳಿಸುವುದಾಗಿ ಹೇಳಿದ್ದಾನೆ. ಇದಕ್ಕೆ ಒಪ್ಪದ ಕುಮಾರ ಹಾಗೂ ಆತನ ಪತ್ನಿ ವೀಣಾ ಶಿವಣ್ಣ ರ ಜೊತೆ ಜಗಳ ಮಾಡಿದ್ದಾರೆ. ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಪರಿಣಾಮ ಶಿವಣ್ಣನ ಬಲಗೈಯ ಮಧ್ಯದ ಬೆರಳು ತುಂಡಾಗಿ ಬಿದ್ದಿದೆ. ಅಲ್ಲದೆ ಎದೆ ಭಾಗಕ್ಕೂ ಏಟಾಗಿದ್ದು ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿದೆ.ಈ ಸಂಬಂಧ ಹೆಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.