ಮತಕ್ಕಾಗಿ ಲಂಚ: ಕೇಜ್ರಿವಾಲ್ ವಿರುದ್ಧ ದೂರು ದಾಖಲಿಸಲು ಚುನಾವಣಾ ಆಯೋಗ ಸೂಚನೆ

Published : Jan 29, 2017, 11:38 AM ISTUpdated : Apr 11, 2018, 01:09 PM IST
ಮತಕ್ಕಾಗಿ ಲಂಚ:  ಕೇಜ್ರಿವಾಲ್ ವಿರುದ್ಧ ದೂರು ದಾಖಲಿಸಲು ಚುನಾವಣಾ ಆಯೋಗ ಸೂಚನೆ

ಸಾರಾಂಶ

ಇನ್ಮುಂದೆ ಅಂತಹ ಹೇಳಿಕೆಗಳನ್ನು ನೀಡಿದ್ದಲ್ಲಿ ಪಕ್ಷದ ಮಾನ್ಯತೆಯನ್ನು ರದ್ದುಗೊಳಿಸುವುದಾಗಿ ಚುನಾವಣಾ ಆಯೋಗ ಎಚ್ಚರಿಸಿದೆ.

ನವದೆಹಲಿ (ಜ.29): ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ವಿರುದ್ಧ ಪ್ರಕರಣ ದಾಖಲಿಸುವಂತೆ ಚುನಾವಣಾ ಅಯೋಗ ಸೂಚನೆ ನೀಡಿದೆ.

ಗೋವಾದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡುವಾಗ, ರಾಜಕೀಯ ಪಕ್ಷಗಳು ಕೊಡುವ ಲಂಚವನ್ನು ಸ್ವೀಕರಿಸಿ, ಆದರೆ ಮತ ಮ್ ಆದ್ಮಿ ಪಕ್ಷಕ್ಕೆ ನೀಡಿ ಎಂದು ಕೇಜ್ರಿವಾಲ್ ಹೇಳಿದ್ದರು.

ರಾಜಕೀಯ ಪಕ್ಷಗಳು 5 ಸಾವಿರ ರೂ. ನೀಡಿದರೆ, ನೀವು 10 ಸಾವಿರ ರೂ.ಗಳನ್ನು ಕೇಳಿ. ಹೊಸ ನೋಟುಗಳನ್ನೇ ಕೇಳಿ ಪಡೆಯಿರಿ ಎಂದು  ಕೇಜ್ರಿವಾಲ್ ಕಳೆದ. ಜ.8ರಂದು ಮತದಾರರಿಗೆ ಹೇಳಿದ್ದರು.

ಕೇಜ್ರಿವಾಲ್ ‘ಲಂಚ’ ಹೇಳಿಕೆಯನ್ನು ಗಮಭೀರವಾಗಿ ಪರಿಗಣಿಸಿದ್ದ ಚುನಾವಣಾ ಆಯೋಗ ಅವರಿಗೆ ಎಚ್ಚರಿಕೆ ನೀಡಿತ್ತು. ಇನ್ಮುಂದೆ ಅಂತಹ ಹೇಳಿಕೆಗಳನ್ನು ನೀಡಿದ್ದಲ್ಲಿ ಪಕ್ಷದ ಮಾನ್ಯತೆಯನ್ನು ರದ್ದುಗೊಳಿಸುವುದಾಗಿ ಚುನಾವಣಾ ಆಯೋಗ ಎಚ್ಚರಿಸಿದೆ.

ಆದರೆ, ನಮ್ಮಿಂದ ಹಣ ಪಡೆದು ನಮಗೆ ಮತ ಹಾಕುವಂತೆ ಹೇಳಿಲ್ಲ, ಚುನಾವಣೆಯಲ್ಲಿ ನಡೆಯುವ ಭ್ರಷ್ಟಾಚಾರವನ್ನು ತಡೆಯುವ ಉದ್ದೇಶದಿಂದ ಹೇಳಿರುವುದಾಗಿ  ಕೇಜ್ರಿವಾಲ್ ಚುನಾವಣಾ ಆಯೋಗಕ್ಕೆ ಸ್ಪಷ್ಟೀಕರಣ ನೀಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಣ್ಣಾ, ಇನ್ನು ಎಷ್ಟೊತ್ತು ಎಂದ ಗ್ರಾಹಕನಿಗೆ ಇದು ಪ್ಲೇನ್ ಅಲ್ಲ ಅಂದ ಬೆಂಗ್ಳೂರು ಕ್ಯಾಬ್ ಡ್ರೈವರ್!
ಸೊಗಸಾದ ಬಜೆಟ್‌ ಫ್ರೆಂಡ್ಲಿ ಸ್ಮಾರ್ಟ್‌ಫೋನು ಬೇಕಾ? ಇಲ್ಲಿದೆ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ17 5ಜಿ!