ನಲಪಾಡ್ ವಿರುದ್ಧ ದಾಖಲಾಯ್ತು ಮತ್ತೊಂದು ಎಫ್ಐಆರ್

By Suvarna Web DeskFirst Published Mar 14, 2018, 1:54 PM IST
Highlights

ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ನಲಪಾಡ್’ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಬೆಂಗಳೂರು :  ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ನಲಪಾಡ್’ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜೈಲಿನಲ್ಲಿರುವಾಗಲೇ ನಲಪಾಡ್ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಕೆಪಿಸಿಸಿ ಕಚೇರಿ  ಬಳಿ ಇರುವ 3 ಎಕರೆ 29 ಗುಂಟೆ ಸರ್ಕಾರದ ಆಸ್ತಿಯನ್ನು ಕಬಳಿಸಲು ನಲಪಾಡ್ ಮತ್ತು ಗ್ಯಾಂಗ್ ಯತ್ನಿಸಿದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಈ ಸಂಬಂಧ ಬಿಬಿಎಂಪಿಯ ಬಿಎಂಟಿಎಫ್’ನಲ್ಲಿ ಪ್ರಕರಣ ದಾಖಲಾಗಿದ್ದು, ಬಿಎಂಟಿಎಫ್’ನಿಂದ  ನೋಟಿಸ್ ನೀಡಲಾಗಿದೆ. ಬಿಬಿಎಂಪಿಯಲ್ಲಿ ಕಂದಾಯ ಅಧಿಕಾರಿಯಾಗಿರುವ ಸೀತಾರಾಂ ಎಂಬುವವರು ಈ ಸಂಬಂಧ ದೂರು ದಾಖಲು  ಮಾಡಿದ್ದಾರೆ. ಬಿಎಂಟಿಎಫ್’ನಲ್ಲಿ ಒಟ್ಟು 22 ಜನರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.

click me!