
ಬೆಂಗಳೂರು : ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ನಲಪಾಡ್’ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜೈಲಿನಲ್ಲಿರುವಾಗಲೇ ನಲಪಾಡ್ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಕೆಪಿಸಿಸಿ ಕಚೇರಿ ಬಳಿ ಇರುವ 3 ಎಕರೆ 29 ಗುಂಟೆ ಸರ್ಕಾರದ ಆಸ್ತಿಯನ್ನು ಕಬಳಿಸಲು ನಲಪಾಡ್ ಮತ್ತು ಗ್ಯಾಂಗ್ ಯತ್ನಿಸಿದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಈ ಸಂಬಂಧ ಬಿಬಿಎಂಪಿಯ ಬಿಎಂಟಿಎಫ್’ನಲ್ಲಿ ಪ್ರಕರಣ ದಾಖಲಾಗಿದ್ದು, ಬಿಎಂಟಿಎಫ್’ನಿಂದ ನೋಟಿಸ್ ನೀಡಲಾಗಿದೆ. ಬಿಬಿಎಂಪಿಯಲ್ಲಿ ಕಂದಾಯ ಅಧಿಕಾರಿಯಾಗಿರುವ ಸೀತಾರಾಂ ಎಂಬುವವರು ಈ ಸಂಬಂಧ ದೂರು ದಾಖಲು ಮಾಡಿದ್ದಾರೆ. ಬಿಎಂಟಿಎಫ್’ನಲ್ಲಿ ಒಟ್ಟು 22 ಜನರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.