ದುನಿಯಾ ವಿಜಿ ದೂರು : ಪಾನಿಪುರಿ ಕಿಟ್ಟಿ ಬಂಧನ?

Published : Sep 26, 2018, 09:15 AM IST
ದುನಿಯಾ ವಿಜಿ ದೂರು : ಪಾನಿಪುರಿ ಕಿಟ್ಟಿ ಬಂಧನ?

ಸಾರಾಂಶ

ಚಲನಚಿತ್ರ ನಟ ದುನಿಯಾ ವಿಜಯ್‌ ಜೈಲು ಸೇರಿದ ಬಳಿಕ ಈಗ ಅವರ ವಿರುದ್ಧ ದೂರು ದಾಖಲಿಸಿದ್ದ ಎದುರಾಳಿಗೂ ಬಂಧನ ಭೀತಿ ಎದುರಾಗಿದೆ.

ಬೆಂಗಳೂರು :  ತಮ್ಮ ಗೆಳೆಯ ಮೇಲೆ ಹಲ್ಲೆ ಪ್ರಕರಣದಲ್ಲಿ ಚಲನಚಿತ್ರ ನಟ ದುನಿಯಾ ವಿಜಯ್‌ ಜೈಲು ಸೇರಿದ ಬಳಿಕ ಈಗ ಅವರ ವಿರುದ್ಧ ದೂರು ದಾಖಲಿಸಿದ್ದ ಎದುರಾಳಿಗೂ ಬಂಧನ ಭೀತಿ ಎದುರಾಗಿದೆ.

ನಟ ದುನಿಯಾ ವಿಜಯ್‌ ಹಾಗೂ ಅವರ ಪುತ್ರ ಸಾಮ್ರಾಟ್‌ಗೆ ಜೀವ ಬೆದರಿಕೆ ಹಾಕಿದ ಆರೋಪದಡಿ ಜಿಮ್‌ ತರಬೇತುದಾರ ಕೃಷ್ಣಮೂರ್ತಿ ಅಲಿಯಾಸ್‌ ಪಾನಿಪೂರಿ ಕಿಟ್ಟಿವಿರುದ್ಧ ಎಫ್‌ಐಆರ್‌ ದಾಖಲಿಸಿದ ಹೈಗ್ರೌಂಡ್ಸ್‌ ಠಾಣೆ ಪೊಲೀಸರು, ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕಿಟ್ಟಿಮತ್ತು ಆತನ ತಂಡಕ್ಕೆ ಪೊಲೀಸರು ಸೂಚಿಸಿದ್ದಾರೆ.

ಕಳೆದ ಶನಿವಾರ ರಾತ್ರಿ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ನಡೆದಿದ್ದ ಗಲಾಟೆ ವಿಚಾರವಾಗಿ ವಿಜಯ್‌ ಅವರ ನೀಡಿದ್ದ ದೂರನ್ನು ಮೊದಲು ಎನ್‌ಸಿಆರ್‌ (ಸಾಮಾನ್ಯ ಪ್ರಕರಣ) ಎಂದು ಪರಿಗಣಿಸಿದ್ದ ಪೊಲೀಸರು, ನ್ಯಾಯಾಲಯದ ಆದೇಶದ ಮೇರೆಗೆ ಆ ದೂರಿನ್ವಯ ಸೋಮವಾರ ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತದ ಈ ರೈಲಿನಲ್ಲಿ ಊಟಕ್ಕೆ ದುಡ್ಡೇ ಬೇಡ! ಇದು ಉಚಿತ ಊಟ ನೀಡುವ ದೇಶದ ಏಕೈಕ ರೈಲು, ನೀವು ಪ್ರಯಾಣಿಸಿದ್ದೀರಾ?
ಮನ್ರೆಗಾ ಹೆಸರು ಬದಲಿಸಲು ಇಚ್ಛಿಸಿದ ಮೋದಿ ಸರ್ಕಾರ, ಇನ್ಮುಂದೆ ಇದು VBGRAMG!