
ಬೆಂಗಳೂರು (ಜ.2): ನಟ ವಿನಯ್ ರಾಜ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲು ಮಾಡಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಲಾಗಿದೆ. ರಾಘವೇಂದ್ರ ರಾಜ್’ ಕುಮಾರ್ ಪುತ್ರ ವಿನಯ್ ರಾಜ್ ಕುಮಾರ್ ವಿರುದ್ಧ ಅಮೃತೇಶ್ ರಿಟ್ ಸಲ್ಲಿಸಿದ್ದಾರೆ.
ಎನ್ಇಎ ಕಾಯ್ದೆ ಅನ್ವಯ ಚಿತ್ರೀಕರಣ ಮಾಡಿದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಲಾಗಿದೆ. ರಾಷ್ಟ್ರೀಯ ಸ್ಮಾರಕಗಳ ಸಂರಕ್ಷಣ ಕಾಯ್ದೆಯ ಅಡಿಯಲ್ಲಿ ಈಗಾಗಲೇ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಪೊಲೀಸರು ಇನ್ನೂ ಯಾವುದೇ ರೀತಿಯಾದ ಕ್ರಮ ಕೈಗೊಂಡಿಲ್ಲ.
ಶೂಟಿಂಗ್ ಅನುಮತಿ ನೀಡಿರುವ ವಿರುದ್ಧ ಕ್ರಮ ಕೈಗೊಳ್ಳುವಂತೆ ರಿಟ್ ಸಲ್ಲಿಸಲಾಗಿದೆ. ಇದರಲ್ಲಿ ಕೋರ್ಟಿನಲ್ಲಿ ಶೂಟ್ ಮಾಡಿರುವ ದೃಶ್ಯಗಳನ್ನು ತೆಗೆಯಲು ಕೋರಲಾಗಿದೆ. ವಿನಯ್ ಅವರ ಅನಂತು / ನುಸ್ರತ್ ಚಿತ್ರದ ಫೊಟೊಶೂಟ್ ಇಲ್ಲಿ ನಡೆಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.