ಕನ್ನಡದ ಖ್ಯಾತ ನಟಿಯ ಮೇಲೆ FIR..! ಬಂಧನದ ಭೀತಿಯಲ್ಲಿ ಹೀರೋಯಿನ್

Published : Mar 10, 2018, 11:14 AM ISTUpdated : Apr 11, 2018, 12:54 PM IST
ಕನ್ನಡದ ಖ್ಯಾತ ನಟಿಯ ಮೇಲೆ FIR..! ಬಂಧನದ ಭೀತಿಯಲ್ಲಿ ಹೀರೋಯಿನ್

ಸಾರಾಂಶ

ಬರೋಡಾ ಬ್ಯಾಂಕ್ ಮ್ಯಾನೇಜರ್ ರಮೇಶ್ ದೂರು ನೀಡಿದ್ದು, ಆರ್.ಎಂ.ಸಿ ಯಾರ್ಡ್ ಪೊಲೀಸರಿಂದ ನಟಿ ಸಿಂಧು ಮೆನನ್ ಸಹೋದರ ಮನೋಜ್ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಅಮೇರಿಕಾದಲ್ಲಿರುವ ನಟಿ ಸಿಂಧು ಮೆನನ್ ವಿರುದ್ಧ ಆರ್'ಎಂಸಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 420 ಕೇಸ್ ಅಡಿ ಪ್ರಕರಣ ದಾಖಲಾಗಿದೆ.

ಬೆಂಗಳೂರು(ಮಾ.10): ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್'ನಿಂದ ಹಣ ಪಡೆದು ವಂಚನೆ ಮಾಡಿದ ಆರೋಪದಡಿ ಕನ್ನಡದ ನಟಿ ಸಿಂಧು ಮೆನನ್ ಮೇಲೆ ಎಫ್'ಐಆರ್ ದಾಖಲಾಗಿದೆ. ನಾಯಕ ನಟಿ ಸಿಂಧು ಮೆನನ್, ಸಹೋದರ ಮನೋಜ್ ಕಾರ್ತಿಕೇನ್ ವರ್ಮ, ನಾಗಶ್ರೀ ಶಿವಣ್ಣ, ಸುಧಾ ರಾಜಶೇಖರ್ ಮೇಲೆ ಆರ್'ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್'ಐಆರ್ ದಾಖಲಾಗಿದ್ದು ನಟಿ ಬಂಧನದ ಭೀತಿಯಲ್ಲಿದ್ದಾರೆ.

ನಕಲಿ ದಾಖಲೆ ನೀಡಿ ಬರೋಡಾ ಬ್ಯಾಂಕ್'ನಿಂದ ಕಾರು ಖರೀದಿಗೆ ನಟಿ ಹಾಗೂ ಸಹೋದರ 36 ಲಕ್ಷ ಹಣ ಪಡೆದು ವಂಚನೆ ಮಾಡಿದ್ದರು. ಪ್ರಕರಣದಲ್ಲಿ ಸಿಂಧು ಮೂರನೇ ಆರೋಪಿಯಾಗಿದ್ದಾರೆ. ಬರೋಡಾ ಬ್ಯಾಂಕ್ ಮ್ಯಾನೇಜರ್ ರಮೇಶ್ ದೂರು ನೀಡಿದ್ದು, ಆರ್.ಎಂ.ಸಿ ಯಾರ್ಡ್ ಪೊಲೀಸರಿಂದ ನಟಿ ಸಿಂಧು ಮೆನನ್ ಸಹೋದರ ಮನೋಜ್ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಅಮೇರಿಕಾದಲ್ಲಿರುವ ನಟಿ ಸಿಂಧು ಮೆನನ್ ವಿರುದ್ಧ ಆರ್'ಎಂಸಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 420 ಕೇಸ್ ಅಡಿ ಪ್ರಕರಣ ದಾಖಲಾಗಿದೆ.

ಕನ್ನಡದ ಚಿತ್ರಗಳಾದ ಖುಷಿ ,ನಂದಿ ,ಸೇರಿದಂತೆ ಮಲಯಾಳಂ ,ತಮಿಳು ಸೇರಿದಂತೆ ಹಲವು ಭಾಷೆಗಳ ಚಿತ್ರಗಳಲ್ಲಿ ಸಿಂಧು ಮೆನನ್ ನಟಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!