ಆಸ್ಪತ್ರೆಯಲ್ಲಿ ಬೆಂಕಿ : ಸಮಯಪ್ರಜ್ಞೆ ಮೆರೆದು 19 ಶಿಶುಗಳ ರಕ್ಷಿಸಿದ ನರ್ಸ್

Published : Mar 03, 2018, 09:09 AM ISTUpdated : Apr 11, 2018, 12:55 PM IST
ಆಸ್ಪತ್ರೆಯಲ್ಲಿ ಬೆಂಕಿ : ಸಮಯಪ್ರಜ್ಞೆ ಮೆರೆದು 19 ಶಿಶುಗಳ ರಕ್ಷಿಸಿದ ನರ್ಸ್

ಸಾರಾಂಶ

ನವಜಾತ ಶಿಶುಗಳ ತೀವ್ರ ನಿಗಾಘಟಕದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ನರ್ಸ್‌ಗಳಿಬ್ಬರ ಸಮಯ ಪ್ರಜ್ಞೆಯಿಂದ 19 ನವಜಾತ ಶಿಶುಗಳು ಪ್ರಾಣಾಪಾಯದಿಂದ ಪಾರಾದ ಘಟನೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಶುಕ್ರವಾರ ನಡೆದಿದೆ.

ತುಮಕೂರು : ನವಜಾತ ಶಿಶುಗಳ ತೀವ್ರ ನಿಗಾಘಟಕದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ನರ್ಸ್‌ಗಳಿಬ್ಬರ ಸಮಯ ಪ್ರಜ್ಞೆಯಿಂದ 19 ನವಜಾತ ಶಿಶುಗಳು ಪ್ರಾಣಾಪಾಯದಿಂದ ಪಾರಾದ ಘಟನೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಶುಕ್ರವಾರ ನಡೆದಿದೆ.

ಜಿಲ್ಲಾಸ್ಪತ್ರೆಯ ನವಜಾತ ಶಿಶುಗಳ ಆರೈಕೆಗಾಗಿ ಇರುವ ಎನ್‌ಐಸಿಯು ಘಟಕದಲ್ಲಿ ರಾತ್ರಿ 7 ಗಂಟೆ ಸುಮಾರಿಗೆ ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿದ್ದರಿಂದ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎನ್ಐಸಿಯುನಲ್ಲಿದ್ದ ನರ್ಸ್‌ಗಳಾದ ಚಿಕ್ಕಸಿದ್ದಮ್ಮ ಹಾಗೂ ರಮೇಶ್ ಅವರು ಘಟಕದ ಕಿಟಕಿ ಗಾಜುಗಳನ್ನು ಒಡೆದು ನವಜಾತ ಶಿಶುಗಳನ್ನು ಕೂಡಲೇ ಬೇರೆ ವಾರ್ಡ್‌ಗಳಿಗೆ ಸ್ಥಳಾಂತರಿಸಿ ಸಮಯ ಪ್ರಜ್ಞೆ ಮೆರೆದಿದ್ದಾರೆ.

ಇದರಿಂದಾಗಿ ಯಾವುದೇ ಅಪಾಯ ಸಂಭವಿಸಿಲ್ಲ. ಎಲ್ಲ 19 ಮಕ್ಕಳು ಸದ್ಯ ಸುರಕ್ಷಿತವಾಗಿವೆ. ಘಟನೆಯಲ್ಲಿ ನವಜಾತ ಶಿಶುಗಳ ಘಟಕ ಭಾಗಶಃ ಬೆಂಕಿಗೆ ಆಹುತಿಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!