
ಬೆಂಗಳೂರು(ನ.08): ಇಬ್ಬರು ಖಳನಟರ ದುರಂತ ಸಾವಿಗೆ ಕಾರಣದವಾದ ಚಿತ್ರೀಕರಣದಲ್ಲಿ ನಿಯಮ ಉಲ್ಲಂಘನೆ ಕಂಡು ಬಂದಿದ್ದು ಈ ಹಿನ್ನಲೆಯಲ್ಲಿ ನಿರ್ಮಾಪಕ, ನಿರ್ದೇಶಕ, ಸಾಹಸ ನಿರ್ದೇಶಕರ ವಿರುದ್ಧ FIR ದಾಖಲು ಮಾಡಲಾಗಿದೆ.
ನಿರ್ಮಾಪಕ ಸುಂದರ್, ನಿರ್ದೇಶಕ ನಾಗಶೇಖರ್, ಸಾಹಸ ನಿರ್ದೇಶಕ ರವಿ ವರ್ಮಾ ವಿರುದ್ಧ ಕೇಸ್ದಲಾಗಿದ್ದು, ಒಟ್ಟು ಚಿತ್ರತಂಡದ ವಿರುದ್ಧ ಸೆಕ್ಷನ್ 188, 304 ರಂತೆ ಕೇಸ್ ದಾಖಲಿಸಿಕೊಳ್ಳಲಾಗಿದೆ
ಸೆಕ್ಷನ್ 188 ಅಂದರೆ ಷರತ್ತುಗಳನ್ನು ಉಲ್ಲಂಘಿಸಿದ ಆರೋಪವಾಗಿದ್ದು, BWSSB ಅನುಮತಿ ಪತ್ರದಲ್ಲಿ ನಮೂದಿಸಿದ್ದ ಷರತ್ತುಗಳು ಚಿತ್ರತಂಡ ಉಲ್ಲಂಘಿಸಿದೆ. ಸೆಕ್ಷನ್ 304 ಅಂದರೆ ಉದ್ದೇಶವಿಲ್ಲದೆ ಕೊಲೆಗೈದ ಪ್ರಕರಣವಾಗಿದ್ದು, ಸೆಕ್ಷನ್ 304ರ ಆರೋಪ ಸಾಬೀತಾದರೆ ಹತ್ತು ವರ್ಷ ಜೈಲು ಶಿಕ್ಷೆ ವಿಧಿಸಬಹುದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.