ಸರ್ಕಾರಿ ಕಟ್ಟಡದಲ್ಲಿ ಅಗ್ನಿ ದುರಂತ: ಮಹತ್ವದ ದಾಖಲೆಗಳು ಭಸ್ಮ!

Published : Mar 06, 2019, 10:58 AM IST
ಸರ್ಕಾರಿ ಕಟ್ಟಡದಲ್ಲಿ ಅಗ್ನಿ ದುರಂತ: ಮಹತ್ವದ ದಾಖಲೆಗಳು ಭಸ್ಮ!

ಸಾರಾಂಶ

ದೆಹಲಿಯ ಸಿಜಿಓ ಕಾಂಪ್ಲೆಕ್ಸ್ ನಲ್ಲಿ ಅಗ್ನಿ ದುರಂತ| ಕಸ್ಮಿಕ ಬೆಂಕಿಯಿಂದ ಮಹತ್ವದ ಸರ್ಕಾರಿ ದಾಖಲೆಗಳು ಸುಟ್ಟು ಭಸ್ಮ| 24 ಅಗ್ನಿಶಾಮಕ ವಾಹನಗಳಿಂದ ರಕ್ಷಣಾ ಕಾರ್ಯ|

ನವದೆಹಲಿ[ಮಾ.06]: ಮಹತ್ವದ ಸರ್ಕಾರಿ ದಾಖಲೆಗಳಿದ್ದ ದೆಹಲಿಯ ಸಿಜಿಓ ಕಾಂಪ್ಲೆಕ್ಸ್ ನಲ್ಲಿ ಅಗ್ನಿ ದುರಂತ ಸಂಭವಿಸಿದೆ. ಆಕಸ್ಮಿಕ ಬೆಂಕಿಯಿಂದ ಮಹತ್ವದ ಸರ್ಕಾರಿ ದಾಖಲೆಗಳು ಸುಟ್ಟು ಭಸ್ಮವಾಗಿವೆ. ಅಲ್ಲದೇ, ಇಲ್ಲಿನ ಭದ್ರತಾ ಸಿಬ್ಬಂದಿಗೆ ಸುಟ್ಟ ಗಾಯಗಳಾಗಿವೆ. ಸ್ಥಳಕ್ಕೆ 24 ಅಗ್ನಿ ಶಾಮಕ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ದೆಹಲಿಯ ಸಿಜಿಓ ಕಾಂಪ್ಲೆಕ್ಸ್ ನಲ್ಲಿನ 5ನೇ ಮಹಡಿಯಲ್ಲಿರುವ ಪಂಡಿತ್ ದೀನ್ ದಯಾಳ್ ಅಂತ್ಯೋದಯ ಭವನದಲ್ಲಿ ಇಂದು ಮಾ.06ರಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಹಾಗೂ ಗಾಯಗೊಂಡ ಭದ್ರತಾ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಅಗ್ನಿ ದುರಂತದಲ್ಲಿ ಹಲವಾರು ಮಹತ್ವದ ಸರ್ಕಾರಿ ದಾಖಲೆಗಳು ಸುಟ್ಟು ಭಸ್ಮವಾಗಿವೆ. ಘಟನೆಗೆ ನಿಖರ ಕಾರಣವೇನೆಂದು ತಿಳಿದು ಬಂದಿಲ್ಲವಾದರೂ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.

ಈ ಬಹುಮಹಡಿ ಕಟ್ಟಡದಲ್ಲಿ ಭಾರತೀಯ ವಾಯುಪಡೆ ಶಾಖೆ, ನೀರು ಮತ್ತು ನೈರ್ಮಲ್ಯ ಸಚಿವಾಲಯ, ಅರಣ್ಯ ಸಚಿವಾಲಯ, , ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ಹಲವು ಸರ್ಕಾರಿ ಕಚೇರಿಗಳು ಅಂತ್ಯೋದಯ ಭವನದಲ್ಲಿದೆ ಎಂದು ವರದಿ ಹೇಳಿದೆ. 2016ರವರೆಗೆ ಈ ಭವನವನ್ನು ಪರ್ಯಾವರಣ್ ಭವನ್ ಎಂದೇ ಕರೆಯಲಾಗುತ್ತಿತ್ತು.ಬಳಿಕ ದೀನ್ ದಯಾಳ್ ಅಂತ್ಯೋದಯ ಭವನ್ ಎಂದು ಮರು ನಾಮಕರಣ ಮಾಡಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ