
ಬೀದರ್(ಸೆ.16): ಚಲಿಸುತ್ತಿದ್ದ ಬಸ್ಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಮೂರು ವರ್ಷದ ಬಾಲಕನೊಬ್ಬ ಸಜೀವ ದಹನವಾದ ಧಾರುಣ ಘಟನೆ ಬೀದರ್ ಜಿಲ್ಲೆ ಹುಮನಾಬಾದ್ ಪಟ್ಟಣದಲ್ಲಿ ನಡೆದಿದೆ.
ಶಿರಡಿಯಿಂದ ಹೈದ್ರಾಬಾದ್'ಗೆ ತೆರಳುತ್ತಿದ್ದ ಸ್ಲೀಪರ್ ಕೋಚ್ ಕಾವೇರಿ ಬಸ್ನಲ್ಲಿ ಈ ಘಟನೆ ನಡೆದಿದೆ. ಹೈದ್ರಾಬಾದ ಮೂಲದ, 3 ವರ್ಷದ ವಿಹಾನ್ ಎಂಬ ಬಾಲಕ ಸಜೀವ ದಹನಗೊಂಡಿದ್ದು, ಘಟನೆಯಲ್ಲಿ ಮೂರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹುಮ್ನಾಬಾದ್ ಪಟ್ಟಣದ ಹೊರವಲಯದ ಠಾಕೂರ್ ಡಾಬಾ ಸಮಿಪ ಈ ಘಟನೆ ನಡೆದಿದೆ. ಬಸ್ ಸುಟ್ಟು ಕರಕಲಾಗಿದ್ದು, ಭಾರಿ ದುರಂತ ತಪ್ಪಿದೆಯಾದರೂ, ಘಟನೆಯಲ್ಲಿ ಬಾಲಕನ ಸಾವು ಪೋಷಕರನ್ನು ಕಂಗಾಲಾಗಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.