
ಮಂಗಳೂರು (ಮಾ. 06): ಬಿಜೆಪಿ ಜನ ಸುರಕ್ಷಾಯಾತ್ರೆ ಸಮಾವೇಶ ಆವರಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಇಲ್ಲಿನ ಕುಳಾಯಿ ಬಳಿ ನಡೆಯುತ್ತಿರುವ ಸಾರ್ವಜನಿಕ ಸಮಾವೇಶ ಆವರಣದಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ. ಯಾರೋ ಸಿಗರೇಟ್ ಸೇದಿ ಬಿಸಾಡಿ ಹೋದ ಬಳಿಕ ಪೊದೆಗೆ ಬೆಂಕಿ ಹೊತ್ತಿಕೊಂಡಿದೆ. ವಂದೇ ಮಾತರಂ ಹಾಡುವ ವೇಳೆ ಧಗಧಗನೆ ಬೆಂಕಿ ಹೊತ್ತಿ ಉರಿದಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಬೆಂಕಿ ಆರಿಸುವ ಕಾರ್ಯ ಮಾಡುತ್ತಿದೆ. ಸಮಾವೇಶದಲ್ಲಿ ಬಿಜೆಪಿ ಮುಖಂಡರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.