
ಬೆಂಗಳೂರು(ಜ.05): ರಾಮನಗರದ ಐಜೂರು ವೃತ್ತದ ಬಳಿ ಭಾರೀ ಅಗ್ನಿ ದುರಂತರವೊಂದು ಸಂಭವಿಸಿದ್ದು, ಬಿಡಿ ಬಟ್ಟೆ, ರಬ್ಬರ್, ಪ್ಲಾಸ್ಟಿಕ್ ಗೋದಾಮಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಸಯ್ಯದ್ ಮುದಾಯಿದ್ ಎಂಬುವವರಿಗೆ ಸೇರಿದ ಮೈಸೂರು ಫಾಲಿಮರ್ಸ್ ಪ್ರೈ.ಲಿ ಗೋದಾಮು ಇದಾಗಿದೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ತಗುಲಿದ್ದು, ಗೋದಾಮಿನಲ್ಲಿ ಲಕ್ಷಾಂತರ ರೂ. ಮೌಲ್ಯದ ಪ್ಲಾಸ್ಟಿಕ್, ಬಿಡಿ ಬಟ್ಟೆ , ಹಾಗೂ ಸಿಲ್ಕ್ ಅನ್ನು ದಾಸ್ತಾನು ಮಾಡಲಾಗಿತ್ತು. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ಎರಡು ಕೊಠಡಿಯಲ್ಲಿದ್ದ ಯಂತ್ರೋಪಕರಣಗಳು ಹಾಗೂ ಬಿಲ್ಡಿಂಗ್'ನ ಕಬ್ಬಿಣದ ವಸ್ತುಗಳು ಸಹ ಭಸ್ಮವಾಗಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.