
ಲಖನೌ[ಡಿ.22]: ರಾಮಾಯಣದಲ್ಲಿ ಶ್ರೀರಾಮನ ಪರಮಭಕ್ತನಾದ ಹನುಮಂತನ ಯಾವ ಸಮುದಾಯಕ್ಕೆ ಸೇರಿದವರು ಎಂಬ ವಾದ-ವಿವಾದಗಳು ಸದ್ಯಕ್ಕೆ ಮುಗಿಯುವ ಸಾಧ್ಯತೆಗಳೇ ಕಾಣುತ್ತಿಲ್ಲ.
ಇತ್ತೀಚೆಗಷ್ಟೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಬಿಜೆಪಿ ಮುಖಂಡರೊಬ್ಬರು ಆಂಜನೇಯ ದಲಿತ ಮತ್ತು ಮುಸ್ಲಿಂ ಸಮುದಾಯಕ್ಕೆ ಸೇರಿದವರು ಎಂದು ಹೇಳಿಕೆ ನೀಡಿದ ಬೆನ್ನಲ್ಲೇ, ಇದೀಗ ಸಿಎಂ ಯೋಗಿ ಸಂಪುಟದ ಸದಸ್ಯರೊಬ್ಬರು, ಹನುಮಂತ ಜಾಟ್ ಸಮುದಾಯಕ್ಕೆ ಸೇರಿದವ ಎಂದಿದ್ದಾರೆ.
ಈ ಬಗ್ಗೆ ಶುಕ್ರವಾರ ಮಾತನಾಡಿದ ಉತ್ತರ ಪ್ರದೇಶದ ಧರ್ಮ ವ್ಯವಹಾರಗಳ ಸಚಿವ ಲಕ್ಷ್ಮಿ ನಾರಾಯಣ ಚೌಧರಿ, ‘ಜಾಟ್ ಸಮುದಾಯದವರು ಹನುಮಂತನ ಹಿನ್ನೆಲೆಯುಳ್ಳವರು. ಯಾಕೆಂದರೆ, ಆಂಜನೇಯ ಜಾಟ್ ಸಮುದಾಯದವರು,’ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ