ರಾಜ್ಯದಲ್ಲಿ ಪ್ರಥಮ ಬಾರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಹೃದಯ ಕಸಿ

Published : Dec 31, 2016, 02:45 AM ISTUpdated : Apr 11, 2018, 01:13 PM IST
ರಾಜ್ಯದಲ್ಲಿ ಪ್ರಥಮ ಬಾರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಹೃದಯ ಕಸಿ

ಸಾರಾಂಶ

ಹೃದಯವನ್ನು ಸಾಗಿಸಲು ಮಣಿಪಾಲ್ ಆಸ್ಪತ್ರೆ ಯಿಂದ  ಜಯದೇವ ಆಸ್ಪತ್ರೆಯವರೆಗೆ ಗ್ರೀನ್ ಕಾರಿಡಾರ್ ಅಂದ್ರೆ ಸಿಗ್ನಲ್ ಮುಕ್ತ ಸಂಚಾರ ವ್ಯವಸ್ಥೆ ನಿರ್ಮಿಸಲಾಗಿತ್ತು

ಬೆಂಗಳೂರಿನ ಓಲ್ಡ್ ಏರ್ ಪೋರ್ಟ್ ಬಳಿ ಇರೋ ಮಣಿಪಾಲ್ ಆಸ್ಪತ್ರೆಯಿಂದ ಜಯದೇವ ಅಸ್ಪತ್ರೆಗೆ ತಡ ರಾತ್ರಿ ಜೀವಂತ ಹೃದಯವನ್ನ ಯಶಸ್ವಿಯಾಗಿ ಸಾಗಿಸಲಾಯ್ತು.ಹೃದಯವನ್ನು ಸಾಗಿಸಲು ಮಣಿಪಾಲ್ ಆಸ್ಪತ್ರೆ ಯಿಂದ  ಜಯದೇವ ಆಸ್ಪತ್ರೆಯವರೆಗೆ ಗ್ರೀನ್ ಕಾರಿಡಾರ್ ಅಂದ್ರೆ ಸಿಗ್ನಲ್ ಮುಕ್ತ ಸಂಚಾರ ವ್ಯವಸ್ಥೆ ನಿರ್ಮಿಸಲಾಗಿತ್ತು.ಬಡ ರೋಗಿ ಹಾಸನದ ಗಂಗಾಧರ್ ಗೆ ಯಶಸ್ವಿಯಾಗಿ ಹೃದಯ ಕಸಿ ಮಾಡಲಾಯ್ತು.ಗಂಗಾಧರ್ ಹಾಸನದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಇನ್ನು ಅಸ್ಸಾಂ ಮೂಲದ ಬೆಂಗಳೂರು ನಿವಾಸಿ ಮರಿಯೋ ಮನೆಯಲ್ಲಿ ಕಾಲು ಜಾರಿ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು..ಕಳೆದ ಎರಡು ದಿನಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೆದುಳು ನಿಷ್ಕ್ರಿಯಗೊಂಡಿದ್ದರಿಂದ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ ಮಾಡಿದ್ದರು..ಈ ಹಿನ್ನೆಲೆಯಲ್ಲಿ ನಿನ್ನೆ ತಡ ರಾತ್ರಿ ಮಣಿಪಾಲ್ ಆಸ್ಪತ್ರೆಯಿಂದ ಜೀವಂತ ಹೃದಯವನ್ನ ಜಯದೇವ ಆಸ್ಪತ್ರೆಗೆ ರವಾನಿಸಲಾಯ್ತು. ಅಂದ ಹಾಗೇ ರಾಜ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಹೃದಯ ಕಸಿ ಚಿಕಿತ್ಸೆ ನಡೆದಿರುವುದು ಇದೆ ಮೊದಲ ಬಾರಿ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜೈಲುಗಳು ರೆಸಾರ್ಟ್‌ಗಳಾಗಿದ್ದು, ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಕೈಮೀರಿದೆ: ಆರ್.ಅಶೋಕ್ ಆತಂಕ
ಕಾಂಗ್ರೆಸ್‌ ಯೋಜನೆ ಹೆಸರು ಬದಲಿಸಿದ್ದೇ ಬಿಜೆಪಿ ಸಾಧನೆ: ಸಚಿವ ಸಂತೋಷ್‌ ಲಾಡ್‌ ವ್ಯಂಗ್ಯ