
ನಾಗಪುರ(ಅ.14) ಮಹಾರಾಷ್ಟ್ರ ಸರಕಾರ ಕುಡುಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಮನೆ ಬಾಗಿಲಿಗೆ ಇನ್ನು ಮುಂದೆ ಮದ್ಯ ಸರಬರಾಜು ಮಾಡಲು ಅವಕಾಶ ನೀಡುವ ಚಿಂತನೆ ನಡೆಸಿದೆ.
ಮಹಾರಾಷ್ಟ್ರ ಅಬಕಾರಿ ಖಾತೆ ಸಚಿವ ಚಂದ್ರಶೇಖರ್ ಬವಂಕುಲೆ ಈ ಬಗ್ಗೆ ಮಾಹಿತಿ ನೀಡಿದ್ದು ಇದು ಅಬಕಾರಿ ಇಲಾಖೆಯಲ್ಲಿನ ಹೊಸ ಬದಲಾವಣೆಗೆ ನಾಂದಿಯಾಗಲಿದ್ದು ದೇಶದ ಇತಿಹಾಸದಲ್ಲೇ ಮಹಾರಾಷ್ಟ್ರ ಮೊದಲ ರಾಜ್ಯವಾಗಲಿದೆ ಎಂದು ಹೇಳಿದ್ದಾರೆ.
ಕುಡಿದು ವಾಹನ ಚಾಲನೆ ಮಾಡುವುದಕ್ಕೆ ಬ್ರೇಕ್ ಹಾಕುವುದು ಮುಖ್ಯ ಉದ್ದೇಶ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಇ ಕಾಮರ್ಸ್ ಸಂಸ್ಥೆಗಳ ರೀತಿಯಲ್ಲಿಯೇ ಕೆಲಸ ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ. ಮದ್ಯ ಆರ್ಡರ್ ಮಾಡುವವರು ಕೆಲ ದಾಖಲೆಗಳನ್ನು ಸಲ್ಲಿಕೆ ಮಾಡಬೇಕಾಗುತ್ತದೆ ಎಂಬ ಮಾಹಿತಿಯನ್ನು ಇದೇ ಸಂದರ್ಭದಲ್ಲಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.