ಉಡುಪಿ ಜಿಲ್ಲಾಧಿಕಾರಿಗಳ ಕೊಲೆ ಯತ್ನ ಪ್ರಕರಣ: ಐವರು ವಶಕ್ಕೆ

Published : Apr 06, 2017, 12:18 PM ISTUpdated : Apr 11, 2018, 12:48 PM IST
ಉಡುಪಿ ಜಿಲ್ಲಾಧಿಕಾರಿಗಳ ಕೊಲೆ ಯತ್ನ ಪ್ರಕರಣ: ಐವರು ವಶಕ್ಕೆ

ಸಾರಾಂಶ

ಉಡುಪಿ ಜಿಲ್ಲಾಧಿಕಾರಿಗಳ ಕೊಲೆ ಯತ್ನ ಪ್ರಕರಣ ಸಂಬಂಧ ಮತ್ತೆ ಐವರನ್ನು ವಶಕ್ಕೆ ಪಡೆಯಲಾಗಿದೆ.

ಉಡುಪಿ (ಏ.06): ಉಡುಪಿ ಜಿಲ್ಲಾಧಿಕಾರಿಗಳ ಕೊಲೆ ಯತ್ನ ಪ್ರಕರಣ ಸಂಬಂಧ ಮತ್ತೆ ಐವರನ್ನು ವಶಕ್ಕೆ ಪಡೆಯಲಾಗಿದೆ.

ಭಾನುವಾರ ತಡ ರಾತ್ರಿ ಕುಂದಾಪುರ ತಾಲೂಕಿನಲ್ಲಿ ಕಂಡ್ಲೂರಿನಲ್ಲಿ ಮರಳು ಅಡ್ಡಗೆ ಡಿಸಿ ಪ್ರಿಯಾಂಕ ಮೇರಿ ಅವರು ದಾಳಿ ನಡೆಸಿದಾಗ ಐವತ್ತಕ್ಕೂ ಅಧಿಕ ಮಂದಿ ಕೊಲೆ ಯತ್ನ ನಡೆಸಿದ್ದರು. ಇದಾದ 24 ಗಂಟೆಯೊಳಗೆ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ನಿನ್ನೆ ಮತ್ತೋರ್ವನ ಬಂಧನವಾಗಿತ್ತು. ಇವತ್ತು ಮತ್ತೆ ಐವರನ್ನು ವಶಕ್ಕೆ ಪಡೆಯಲಾಗಿದೆ.   ಇಂದು ಬಂಧನಕ್ಕೊಳಗಾದವರು ಉತ್ತರ ಪ್ರದೇಶ ಮೂಲದ ಕಾರ್ಮಿರಾಗಿದ್ದು, ಆರೋಪಿಗಳ ಮೇಲೆ ಜಿಲ್ಲಾಧಿಕಾರಿಗಳ ದೂರಿನಂತೆ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಇನ್ನೂ ಪ್ರಕರಣದಲ್ಲಿ ಮತ್ತಷ್ಟು ಮಂದಿಯ ಬಂಧನವಾಗುವ ಸಾಧ್ಯತೆಯಿದೆ.

ಈ ಮರಳು ಅಡ್ಡೆ ಯಾರಿಗೆ ಸೇರಿದ್ದು ಅನ್ನೋದು ಇನ್ನೂ ನಿಗೂಢವಾಗಿದೆ. ಅವರ ಮೇಲೂ ಕ್ರಮ ಕೈಗೊಳ್ಳಬೇಕೆಂದು ಜಿಲ್ಲೆ ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ. ಬಂಧಿತ ವಿವರ ಹೀಗಿದೆ. ಸುಭಾಷ್, ಮಹಮ್ಮದ್ ಸಫಾನ್, ಮಹಮ್ಮದ್ ಶಾಕೀಪ್, ಅಪ್ಸಾನ್, ಅಬ್ದುಲ್ ಸತ್ತಾರ್, ಭಾಸ್ಕರ ಮೊಗವೀರ ಯುಪಿ ಮೂಲದ ಗೋರಕ್ ನಾಥ್, ಭೂತಾನ್, ಅನಿಲ್, ಸರವಣ ಕುಮಾರ್, ರವಿ ಎಂದು ಗುರುತಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bengaluru: 70 ವರ್ಷದ ಪತಿಯ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ 67 ವರ್ಷದ ನಿವೃತ್ತ ಪ್ರಾಧ್ಯಾಪಕಿ!
ನಾಳೆಯಿಂದಲೇ ಖಾಸಗಿ-ಸರ್ಕಾರಿ ಶೇ.50 ಉದ್ಯೋಗಿಗಳಿಗೆ ರಷ್ಟು ವರ್ಕ್ ಫ್ರಮ್ ಹೋಮ್ ಕಡ್ಡಾಯ