ಗಡಿಯಲ್ಲಿ ಮತ್ತೆ ಬಾಂಬ್ ಸ್ಪೋಟ: ಐವರು ಸಿಆರ್‌ಪಿಎಫ್ ಯೋಧರಿಗೆ ಗಾಯ

Published : Sep 26, 2016, 12:03 PM ISTUpdated : Apr 11, 2018, 12:42 PM IST
ಗಡಿಯಲ್ಲಿ ಮತ್ತೆ ಬಾಂಬ್ ಸ್ಪೋಟ: ಐವರು ಸಿಆರ್‌ಪಿಎಫ್ ಯೋಧರಿಗೆ ಗಾಯ

ಸಾರಾಂಶ

ಶ್ರೀನಗರ(ಸೆ.26):  ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಗ್ರೆನೇಡ್ ದಾಳಿ ನಡೆಸಲಾಗಿದ್ದು, ದಾಳಿಯಲ್ಲಿ 5 ಸಿಆರ್'ಪಿಎಫ್ ಯೋಧರು ಗಾಯಗೊಂಡಿರುವ ಘಟನೆ ಇಂದು ನಡೆದಿದೆ.

ವಾನ್ಪೋಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ರೆನೇಡ್ ದಾಳಿ ನಡೆಸಲಾಗಿದೆ. ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ನಾಗರೀಕರಿಗೆ ಗಾಯಗಳಾಗಿರುವ ಕುರಿತಂತೆ ಇದುವರೆಗೂ ಯಾವುದೇ ವರದಿಗಳಾಗಿಲ್ಲ. ದಾಳಿಯ ಹೊಣೆಯನ್ನು ಈ ವರೆಗೂ ಯಾವುದೇ ಉಗ್ರ ಸಂಘಟನೆಗಳು ಹೊತ್ತುಕೊಂಡಿಲ್ಲ.

ಜುಲೈ 8 ರಂದು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಬುಹ್ರಾನ್ ವಾನಿ ಹತ್ಯೆಯ ನಂತರ ಕಳೆದ ಒಂದೂವರೆ ತಿಂಗಳಿನಿಂದ ಕುಲ್ಗಾಮ್ ಜಿಲ್ಲೆಯೊಂದರಲ್ಲೇ ನಡೆದ ಗಲಭೆಯಲ್ಲಿ 90ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಈ ದೇಶದಲ್ಲಿ ದೇವರಿಗೇ ಜಾಗವಿಲ್ಲ; ಬೈಬಲ್, ಕುರಾನ್ ಸಿಕ್ಕರೆ ನೇರ ಜೈಲು, ಮರಣದಂಡನೆ!
ಟ್ರಾಫಿಕ್ ದಂಡ ಇನ್ನೂ ಕಟ್ವಿಲ್ವಾ? ಹೀಗೆ ಭಾರತದಲ್ಲಿ ಬಾಕಿ ಉಳಿದಿರುವ ಮೊತ್ತ 39000 ಕೋಟಿ ರೂ