ಗಡಿಯಲ್ಲಿ ಬೆಳ್ಳಂಬೆಳಗ್ಗೆ ಪಾಕ್ ಪಡೆಗಳ ಅಟ್ಟಹಾಸ : ಒಂದೇ ಕುಟುಂಬದ ಐವರ ಸಾವು

Published : Mar 18, 2018, 12:07 PM ISTUpdated : Apr 11, 2018, 12:50 PM IST
ಗಡಿಯಲ್ಲಿ ಬೆಳ್ಳಂಬೆಳಗ್ಗೆ ಪಾಕ್ ಪಡೆಗಳ ಅಟ್ಟಹಾಸ : ಒಂದೇ ಕುಟುಂಬದ ಐವರ ಸಾವು

ಸಾರಾಂಶ

ಜಮ್ಮು ಕಾಶ್ಮೀರದಲ್ಲಿ ಯುಗಾದಿಯ ಬೆಳ್ಳಂಬೆಳಗ್ಗೆ ಪಾಕಿಸ್ತಾನ ಪಡೆಗಳು ಅಟ್ಟಹಾಸ ಮೆರೆದಿದ್ದು,  ಒಂದೇ ಕುಟುಂಬದ ಐವರು ನಾಗರಿಕರು ಸಾವನ್ನಪ್ಪಿದ್ದಾರೆ. ಅಲ್ಲದೇ ಇನ್ನಿಬ್ಬರು ಗಾಯಗೊಂಡಿದ್ದಾರೆ. 

ಜಮ್ಮು : ಜಮ್ಮು ಕಾಶ್ಮೀರದಲ್ಲಿ ಯುಗಾದಿಯ ಬೆಳ್ಳಂಬೆಳಗ್ಗೆ ಪಾಕಿಸ್ತಾನ ಪಡೆಗಳು ಅಟ್ಟಹಾಸ ಮೆರೆದಿದ್ದು,  ಒಂದೇ ಕುಟುಂಬದ ಐವರು ನಾಗರಿಕರು ಸಾವನ್ನಪ್ಪಿದ್ದಾರೆ. ಅಲ್ಲದೇ ಇನ್ನಿಬ್ಬರು ಗಾಯಗೊಂಡಿದ್ದಾರೆ. 

ಪೂಂಚ್ ಜಿಲ್ಲೆಯ ಬಲಾಕೋಟ್’ನಲ್ಲಿ ಪ್ರದೇಶದಲ್ಲಿ ನಡೆದ ಗುಂಡಿನ ದಾಳಿಯಲ್ಲಿ  ನಾಗರಿಕರ ಹತ್ಯೆಯಾಗಿದೆ.  ಮುಂಜಾನೆ 7.45ರ ಸುಮಾರಿಗೆ ಜಮ್ಮು ಕಾಶ್ಮೀರದ  ಬಿಂಬರ್ ವಾಲಿ ಸೆಕ್ಟರ್ ಬಳಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಐವರು ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು  ಸೇನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಲೆ. ಕರ್ನಲ್ ದೇವೇಂದ್ರ ಆನಂದ್ ಹೇಳಿದ್ದಾರೆ.

 ಗಡಿ ನಿಯಂತ್ರಣ ರೇಖೆಯಿಂದ ಮೂರು ನಾಲ್ಕು ಕಿಲೋಮೀಟರ್ ದೂರ ಇರುವ ನಾಗರಿಕರನ್ನು ಗುರಿಯಾಗಿಸಿಕೊಂಡೇ ಗುಂಡಿನ ದಾಳಿ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಯಾವುದೇ ಸೇನಾ ಪಡೆಯನ್ನೂ ಕೂಡ ನಿಯೋಜನೆ ಮಾಡಲಾಗಿಲ್ಲ. ಆದ್ದರಿಂದ ಇಂತಹ ಭೀಕರ ಅನಾಹುತ ಸಂಭವಿಸಿದೆ. ಘಟನೆ ಬಳಿಕ ಪಾಕ್ ಪಡೆಗಳಿಗೆ ಸೂಕ್ತ  ಪ್ರತಿಕ್ರಿಯೆ ನೀಡಲಾಗಿದೆ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!
ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ