
ಬೆಂಗಳೂರು[ಡಿ.07] ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಎದುರಾಗಿದ್ದ ನಂತರ ಕಾಂಗ್ರೆಸ್ ಮತ್ತು ಜೆಡಿಎಸ್ ಒಂದಾಗಿ ಸರ್ಕಾರ ರಚನೆ ಮಾಡಿಕೊಂಡು 6 ತಿಂಗಳೂ ಕಳೆದಿವೆ. ದೋಸ್ತಿ ಸರ್ಕಾರ ಆಡಳಿತವನ್ನು ನಡೆಸುತ್ತಿದೆ. ಆದರೆ ಲೋಕಸಭೆ ಚುನಾವಣೆಗೆ ಇನ್ನೊಂದು 5 ತಿಂಗಳು ಬಾಕಿ ಇರುವಾಗ 5 ರಾಜ್ಯಗಳಲ್ಲಿ ಅಸೆಂಬ್ಲಿ ಚುನಾವಣೆ ನಡೆದಿದೆ. ಹಾಗಾದರೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ಪರಿಣಾಮ ಬೀರಬಹುದು?
1. ಆಪರೇಶನ್ ಕಮಲಕ್ಕೆ ಬ್ರೇಕ್: ಸಮೀಕ್ಷಾ ವರದಿ ಹೇಳುವಂತೆ ಬಿಜೆಪಿಗೆ ಹಿನ್ನಡೆ ಆಗಿದ್ದೆ ಆದಲ್ಲಿ ರಾಜ್ಯ ರಾಜಕಾರಣದಲ್ಲಿ ಆಗಾಗ ಏಳುತ್ತಿರುವ ಆಪರೇಶನ್ ಕಮಲದ ಕೂಗಿಗೆ ಸಂಪೂರ್ಣ ಬ್ರೇಕ್ ಬೀಳಲಿದೆ.
2. ಕಾಂಗ್ರೆಸ್ ಗೆ ಸಂಘಟನೆ ಬಲ: ಜೆಡಿಎಸ್ನೊಂದಿಗೆ ಕೈ ಜೋಡಿಸಿ ಸಂಘಟನೆಯಲ್ಲಿ ಹಿಂದೆ ಬಿದ್ದಿರುವ ಕಾಂಗ್ರೆಸ್ ಸೋತರೂ ಅಥವಾ ಗೆದ್ದರೂ ಎಚ್ಚೆತ್ತುಕೊಂಡು ಲೋಕಸಭಾ ಚುನಾವಣೆಗೆ ಸಿದ್ಧವಾಗಬಹುದು.
ಮೈತ್ರಿ ಸರ್ಕಾರ ಉರುಳಿಸಲು ಇವರಿಬ್ಬರೇ ಸಾಕಂತೆ: ಯಾರವರು..?
3. ಮೈತ್ರಿಗೆ ಬಲ: ದೋಸ್ತಿಗಳು ಮತ್ತಷ್ಟು ಗಟ್ಟಿಯಾಗಿ ಮುಂದಿನ ಲೋಕಸಭಾ ಚುನಾವಣೆಯನ್ನು ಒಟ್ಟಾಗಿ ಎದುರಿಸುವ ತೀರ್ಮಾನಕ್ಕೆ ಬರಬಹುದು.
4.ಬಿಜೆಪಿ ನಾಯಕತ್ವ ಬದಲಾವಣೆ: ಬಿಜೆಪಿಯಲ್ಲಿ ಅಲ್ಲಲ್ಲಿ ಕೇಳಿ ಬರುತ್ತಿರುವ ನಾಯಕತ್ವ ಬದಲಾವಣೆ ಕೂಗು ಜೋರಾಗಿ ಯುವ ನಾಯಕತ್ವಕ್ಕೆ ಬೇಡಿಕೆ ಶುರುವಾಗಬಹುದು.
5. ಜೆಡಿಎಸ್ಗೆ ಆಯ್ಕೆ ಸಮಸ್ಯೆ: ಒಂದು ವೇಳೆ ಕಾಂಗ್ರೆಸ್ ಒಟ್ಟಾಗಿ ಚುನಾವಣೆ ಎದುರಿಸಲು ಬಂದರೂ ಜೆಡಿಎಸ್ ಹಿಂದೆ ಸರಿಯಬಹುದು. ಅಧಿಕಾರ ಕಂಡಿರುವ ಪಕ್ಷ ತನಗೆ ಇಂತಿಷ್ಟು ವಿಧಾನಸಭಾ ಸೀಟು ಬಿಟ್ಟುಕೊಡುವಂತೆ ಪಟ್ಟು ಹಿಡಿದು ಕೂರಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.