
ಬಂಟ್ವಾಳ(ನ.07): ನದಿಯಲ್ಲಿ ಈಜಲು ತೆರಳಿದ ಐವರು ಬಾಲಕರು ನೀರುಪಾಲಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮುಲ್ಲಾರಪಟ್ನದ ಬಳಿ ನಡೆದಿದೆ.
ಸವದ್ (16),ರಮೀಝ್ (15), ಅಜ್ಮಲ್ (15), ಅಸ್ಲಮ್ (16), ಮುದಸ್ಸಿರ್ (16) ಮೃತ ದುರ್ದೈವಿಗಳು. ಇವರು ಫಲ್ಗುಣಿ ನದಿಯಲ್ಲಿ ಈಜಲು ಹೋಗಿದ್ದರು. ಅಗ್ನಿಶಾಮಕ ದಳ, ಪೊಲೀಸರಿಂದ ಶವಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಬಂಟ್ವಾಳ ಗ್ರಾ. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.