ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ : ಕಟ್ಟೆಚ್ಚರ

Published : Aug 12, 2018, 08:05 AM ISTUpdated : Sep 09, 2018, 10:00 PM IST
ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ : ಕಟ್ಟೆಚ್ಚರ

ಸಾರಾಂಶ

ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು ಈ ನಿಟ್ಟಿನಲ್ಲಿ ಕಾವೇರಿ ನದಿ ಪಾತ್ರದ ಪ್ರದೇಶಗಳಲ್ಲಿ ಪ್ರವಾಹದ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ. 

ಬೆಂಗಳೂರು :  ಕಾವೇರಿ ಕಣಿವೆ ಸೇರಿದಂತೆ ಕೇರಳದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಪ್ರಮಾಣದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ಕಣಿವೆಯ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರಿಗೆ ಮತ್ತು ಪ್ರವಾಸಿಗರಿಗೆ ಪ್ರವಾಹ ಮುನ್ಸೂಚನೆ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ (ಕೆಎಸ್‌ಎನ್‌ಡಿಎಂಸಿ) ಜಿ.ಎಸ್‌. ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.

ರಾಜ್ಯವಿಪತ್ತು ನಿರ್ವಹಣಾ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅವರು, ಆ.14 ವರೆಗೂ ಮಳೆ ಮುಂದುವರೆಯಲಿದ್ದು, ಮಲೆನಾಡು ಮತ್ತು ಕರಾವಳಿಗೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಈಗಾಗಲೇ ಮುನ್ನೆಚ್ಚರಿಕೆ ವಹಿಸುವಂತೆ ಮೈಸೂರು ಪ್ರಾಂತ್ಯದ ಕೆಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಹಾಗೂ ಕೃಷಿ ಇಲಾಖೆಯ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. 

ಕೆ.ಆರ್‌.ಎಸ್‌ ಹಾಗೂ ಕಬಿನಿ ಜಲಾಶಯಗಳಿಂದ 1.40 ಲಕ್ಷ ಕ್ಯುಸೆಕ್ಸ್‌ ನೀರನ್ನು ಹರಿಬಿಡಲಾಗಿದ್ದು, ಕಾವೇರಿ ಕಣಿವೆಯ ಪಾತ್ರದ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇನ್ನು ಎರಡ್ಮೂರು ದಿನ ಮಳೆ ಮುಂದುವರೆಯಲಿದ್ದು ನದಿ ನೀರಿನ ಮಟ್ಟಹೆಚ್ಚಾಗುವ ಸಾಧ್ಯತೆಗಳಿವೆ. ಹಾಗಾಗಿ, ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ವಾರಾಂತ್ಯವಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ನದಿ ವೀಕ್ಷಣೆಗೆ ಹೋಗುವ ಸಾಧ್ಯಗಳಿದೆ. ಈ ವೇಳೆ ಎಚ್ಚರಿಕೆಯಿಂದ ಇರಬೇಕು. ಸೆಲ್ಫಿ ತೆಗೆದುಕೊಳ್ಳುವುದು, ನದಿಯಲ್ಲಿ ಈಜುವುದಕ್ಕೆ ಹೋಗದಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೈ ಅಭ್ಯರ್ಥಿಗಳ ಸೋಲಿಗೆ ಆ ಪಕ್ಷದ ನಾಯಕರೇ ಮುಂದು: ಶಾಸಕ ಬಸನಗೌಡ ಪಾಟೀಲ ಯತ್ನಾಳ ಲೇವಡಿ
28ರ ಜಿಮ್ ಟ್ರೈನರ್‌ಗೆ 42ರ ಮಹಿಳೆ ಜೊತೆ ಸಂಬಂಧ? ಯುವಕನ ಸಾವಿನ ಹಿಂದೆ ಆಂಟಿ ಕರಿನೆರಳು