
ಮಡಿಕೇರಿ: ಕೊಡಗಿನ ಪ್ರಕೃತಿ ವಿಕೋಪದ ಪರಿಹಾರ ಪಡೆಯುವ ಉದ್ದೇಶದಿಂದ ಸ್ವಂತ ಮಗುವೇ ಸತ್ತಿದೆ ಎಂದು ದಂಪತಿ ವಂಚಿಸಿರುವ ಘಟನೆ ಮಡಿಕೇರಿಯಲ್ಲಿ ಬೆಳಕಿಗೆ ಬಂದಿದೆ. ತಾಲೂಕಿನ ಕಾಲೂರು ಗ್ರಾಮದ ಸೋಮಶೇಖರ್ ಮತ್ತು ದಂಪತಿ ಹೀಗೆ ವಂಚಿಸಲು ಯತ್ನಿಸಿದ ದಂಪತಿ.
ಮಹಾಮಳೆ ಸಂದರ್ಭ ಮಡಿಕೇರಿ ಮೈತ್ರಿ ಸಭಾಂಗಣದ ಪರಿಹಾರ ಕೇಂದ್ರಕ್ಕೆ ಆಗಮಿಸಿ ಉಳಿದುಕೊಂಡಿದ್ದ ದಂಪತಿ ತಮ್ಮ 7 ವರ್ಷದ ಮಗ ನದಿಯಲ್ಲಿ ಕೊಚ್ಚಿ ಹೋಗಿದ್ದಾನೆಂದು ತಿಳಿಸಿದ್ದರು. ಈ ಬಗ್ಗೆ ಪೊಲೀಸರಿಗೆ ದೂರು ಕೂಡ ನೀಡಿದ್ದರಿಂದ ಬಾಲಕನ ಪತ್ತೆಗಾಗಿ ರಕ್ಷಣಾ ತಂಡ ಹಲವು ದಿನಗಳ ಕಾರ್ಯಾಚರಣೆ ನಡೆಸಿತ್ತು.
ಮಾಧ್ಯಮಗಳಲ್ಲಿ ವರದಿ ಬಿತ್ತರವಾಗುತ್ತಿದ್ದಂತೆ ಮಡಿಕೇರಿಗೆ ಆಗಮಿಸಿದ ಕೋತೂರಿನ ಸತೀಶ್ ಎಂಬವರು ಈ ಕುರಿತು ಸ್ಪಷ್ಟನೆ ನೀಡಿ, ಬಾಲಕ ಬದುಕಿರುವುದನ್ನು ತಿಳಿಸಿದ್ದಾರೆ. ಬಾಲಕನ ತಾಯಿ ಸುಮಾ ವಿರಾಜಪೇಟೆ ಬಳಿಯ ತನ್ನ ತಾಯಿಯ ಮನೆಯಲ್ಲಿ ಮಗನನ್ನು ಬಿಟ್ಟಿದ್ದರು ಎಂಬುದು ಇದೀಗ ಬೆಳಕಿಗೆ ಬಂದಿದೆ. ಈ ಬಗ್ಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ದಂಪತಿಯನ್ನು ವಶಕ್ಕೆ ಪಡೆಯಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.