ಕರ್ನಾಟಕ, ಮಹಾರಾಷ್ಟ್ರ ಪ್ರವಾಹದಿಂದ ದೇಶಕ್ಕೆ ಈಗ ಈರುಳ್ಳಿ ಕೊರತೆ ಭೀತಿ!

Published : Aug 22, 2019, 04:47 PM IST
ಕರ್ನಾಟಕ, ಮಹಾರಾಷ್ಟ್ರ ಪ್ರವಾಹದಿಂದ ದೇಶಕ್ಕೆ ಈಗ ಈರುಳ್ಳಿ ಕೊರತೆ ಭೀತಿ!

ಸಾರಾಂಶ

ಕರ್ನಾಟಕ, ಮಹಾರಾಷ್ಟ್ರ ಪ್ರವಾಹದಿಂದ ದೇಶಕ್ಕೆ ಈಗ ಈರುಳ್ಳಿ ಕೊರತೆ ಭೀತಿ| ಮಾರುಕಟ್ಟೆಗೆ ಬಿಡದೇ ಈರುಳ್ಳಿ ದಾಸ್ತಾನು ಇಟ್ಟುಕೊಂಡಿದ್ದು ಕಂಡು ಬಂದರೆ ಕಠಿಣ ಕ್ರಮ : ಸರ್ಕಾರ ಎಚ್ಚರಿಕೆ

ನವದೆಹಲಿ[ಆ.22]: ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದರಿಂದ ದೇಶದಲ್ಲಿ ಈರುಳ್ಳಿ ಕೊರತೆ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

ಮಾರುಕಟ್ಟೆಗೆ ಬಿಡದೇ ಈರುಳ್ಳಿ ದಾಸ್ತಾನು ಇಟ್ಟುಕೊಂಡಿದ್ದು ಕಂಡು ಬಂದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಬುಧವಾರ ಎಚ್ಚರಿಕೆ ನೀಡಿದೆ. ಗ್ರಾಹಕ ವ್ಯವಹಾರಗಳ ಇಲಾಖೆ ನಡೆಸಿದ ಉನ್ನತ ಮಟ್ಟದ ಸಭೆಯಲ್ಲಿ ಈರುಳ್ಳಿಯ ಬೆಲೆಯ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಪ್ರತಿ ಕೆ.ಜಿ.ಗೆ 24 ರು.ಗಿಂತಲೂ ಹೆಚ್ಚಿನ ದರಕ್ಕೆ ಮಾರಾಟ ಮಾಡಲು ಕಡಿವಾಣ ಹಾಕಲು ನಿರ್ಧರಿಸಲಾಗಿದೆ.

ಅಲ್ಲದೇ ಗ್ರಾಹಕ ವ್ಯವಹಾರಗಳ ಇಲಾಖೆ ಆಗಾಗ ಈರುಳ್ಳಿ ದರದ ಮೇಲ್ವಿಚಾರಣೆ ಮಾಡಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಯಚೂರು: ಎರಡು ಬುಲೆರೋಗಳ ನಡುವೆ ಭೀಕರ ಡಿಕ್ಕಿ; ಅಪ್ಪ-ಮಗ ಸೇರಿ ಐವರು ಬಲಿ, ಹಲವರು ಗಾಯ, ಮೂರು ಕುರಿಗಳು ಸಾವು!
ವೇಗವಾಗಿ ಬಂತು ಹೊಸ ಕಾರು, ಹೋಯ್ತು ಮಗುವಿನ ಪ್ರಾಣ: ತರಬೇತಿ ಇಲ್ಲದ ಚಾಲಕನ ಹುಚ್ಚಾಟಕ್ಕೆ 5 ವರ್ಷದ ಬಾಲಕ ಬಲಿ!