'ಕೇಂದ್ರದ ನೆರೆ ಪರಿಹಾರ ಯಾವುದಕ್ಕೂ ಸಾಲದು'

Published : Oct 06, 2019, 11:25 AM IST
'ಕೇಂದ್ರದ ನೆರೆ ಪರಿಹಾರ ಯಾವುದಕ್ಕೂ ಸಾಲದು'

ಸಾರಾಂಶ

ಕೇಂದ್ರದ ಅನುದಾನ ಏತಕ್ಕೂ ಸಾಲದು| ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತಾಹ ನೆರೆ ಪರಿಹಾರ: ಸತೀಶ ಲೇವಡಿ

ಬೆಳಗಾವಿ[ಅ.06]: ರಾಜ್ಯದ ನೆರೆ ಸಂತ್ರಸ್ತರಿಗೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡುಗಡೆ ಮಾಡಿರುವ ಹಣ ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತಾಗಿದೆ ಎಂದು ಮಾಜಿ ಸಚಿವ, ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕೇವಲ ಶೇ.10 ರಷ್ಟುಮಾತ್ರ ಅನುದಾನ ಬಿಡುಗಡೆ ಮಾಡಿದೆ. ಆದರೆ, ಇದು ಪ್ರವಾಹ ಬಾಧಿತ ಸಂತ್ರಸ್ತರಿಗೆ ಏತಕ್ಕೂ ಸಾಲುವುದಿಲ್ಲ. ನಾವು ಹೋರಾಟ ಮಾಡಿದ ಫಲವಾಗಿಯೇ ಕೇಂದ್ರ ಇಷ್ಟಾದರೂ ಅನುದಾನ ಬಿಡುಗಡೆ ಮಾಡಿದೆ. ಇನ್ನೂ ಹೆಚ್ಚಿನ ಅನುದಾನ ಬರುವ ನಿರೀಕ್ಷೆಯಿದೆ ಎಂದು ಹೇಳಿದರು.

ನಾವು ಮತ್ತೆ ಹೋರಾಟ ಮಾಡುತ್ತೇವೆ. ಕೇಂದ್ರ ಸದ್ಯ ಅಲ್ಪ ಪ್ರಮಾಣದ ಅನುದಾನ ಬಿಡುಗಡೆ ಮಾಡಿದೆ. ನೆರೆ ಸಂತ್ರಸ್ತರಿಗೆ ಕೂಡಲೇ ಪರಿಹಾರಧನ ವಿತರಿಸಬೇಕು. ನೆರೆಯಿಂದ ಹಾನಿಗೀಡಾದ ಅಂಗಡಿಕಾರರಿಗೂ .10 ಸಾವಿರ ರುಪಾಯಿ ಪರಿಹಾರ ಧನ ನೀಡುವಂತೆ ಸಿಎಂ ಯಡಿಯೂರಪ್ಪ ಆದೇಶ ನೀಡಿದ್ದರೂ ಅದು ಕಾರ್ಯಗತವಾಗಿಲ್ಲ ಎಂದು ಆರೋಪಿಸಿದರು.

ಸ್ವಪಕ್ಷದ ಮುಖಂಡರೇ ಈಗ ಕೇಂದ್ರದ ಮೇಲೆ ರಾಜ್ಯಕ್ಕೆ ಪರಿಹಾರ ಬಿಡುಗಡೆ ಮಾಡುವಂತೆ ಒತ್ತಡ ಹೇರುತ್ತಿದ್ದಾರೆ. ಆದರೆ, ನೆರೆ ಸಂತ್ರಸ್ತರಿಗೆ ಪರಿಹಾರ ಕೇಳಿದವರಿಗೆ ನೋಟಿಸ್‌ ನೀಡಿ ಅವರನ್ನು ದೇಶದ್ರೋಹಿ ಎನ್ನಲಾಗುತ್ತಿದೆ ಎಂದರು.

ನೆರೆ ಸಂತ್ರಸ್ತರ ಸಂಕಷ್ಟಕ್ಕೆ ಸ್ಪಂದಿಸಿರುವ ನಾವು ಹೆಚ್ಚಿನ ಪರಿಹಾರ ನೀಡುವಂತೆ ಪ್ರತಿಭಟನೆ ಮೂಲಕ ಕೇಂದ್ರದ ಮೇಲೆ ಒತ್ತಡ ಹೇರಿದ್ದೇವೆ. ಈ ಕುರಿತು ಅಧಿವೇಶನದಲ್ಲಿಯೂ ದನಿ ಎತ್ತಲಾಗುವುದು. ಮುಂಬರುವ ಡಿಸೆಂಬರ್‌ ತಿಂಗಳಿಲ್ಲಾದರೂ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲ ಅಧಿವೇಶನ ನಡೆಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಗೋಕಾಕ ಕ್ಷೇತ್ರದಲ್ಲಿ ನಿರಂತರವಾಗಿ ಪ್ರವಾಸ ಕೈಗೊಳ್ಳಲಾಗಿದೆ. ಕಾಂಗ್ರೆಸ್‌ನಿಂದ ಅಶೋಕ ಪೂಜಾರಿ ಸ್ಪರ್ಧಿಸುವ ಸಂಬಂಧ ಚರ್ಚಿಯಾಗಿದೆ ನಿಜ. ಆದರೆ, ಇನ್ನೂ ಅಭ್ಯರ್ಥಿ ಅಂತಿಮವಾಗಿಲ್ಲ. ಯಾರು ಕೂಡ ಬಂದು ಟಿಕೆಟ್‌ ಕೇಳಿಲ್ಲ. ಸದ್ಯ ಲಖನ್‌ ಜಾರಕಿಹೊಳಿ ಮಾತ್ರ ರೇಸಿನಲ್ಲಿದ್ದಾರೆ. ರಮೇಶ ಜಾರಕಿಹೊಳಿ ತಮ್ಮ ಚುನಾವಣಾ ಸಿದ್ಧತೆ ಮಾಡುತ್ತಿದ್ದಾರೆ. ನಾವು ಕೂಡ ಚುನಾವಣಾ ತಯಾರಿ ಮಾಡಿಕೊಂಡಿದ್ದೇವೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಾಮರಾಜನಗರ: ಪಾದಯಾತ್ರೆಗೆ ಹೋರಟಿದ್ದವರ ಮೇಲೆ ಚಿರತೆ ಅಟ್ಯಾಕ್, ಮಾದಪ್ಪ ಭಕ್ತ ಸಾವು!
ವಿರೋಧದ ಬಳಿಕ ಮೆತ್ತಗಾದ ದೊಡ್ಡಣ್ಣ, 'ನನಗೆ ಗ್ರೀನ್‌ಲ್ಯಾಂಡ್‌ ಬೇಕು, ಆದರೆ ಸೇನೆ ಉಪಯೋಗ ಮಾಡಲ್ಲ' ಎಂದ ಟ್ರಂಪ್‌!