
ಹೈದ್ರಾಬಾದ್(ಸೆ.28): ಹೈದ್ರಾಬಾದ್ನ ಮೆಡಿಚಲ್ ಗ್ರಾಮದ ಬಳಿ ಬೈಕ್ ಸವಾರನೊಬ್ಬ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾನೆ.. ಧಾರಾಕಾರ ಮಳೆಯಿಂದ ಹಳ್ಳ-ಕೊಳ್ಳ ತುಂಬಿ ಹರಿಯುತ್ತಿದ್ದು, ರಸ್ತೆಗಳೆಲ್ಲ ಮುಳುಗಿ ಹೋಗಿವೆ.
ಮೆಡಿಚಲ್ ಗ್ರಾಮದ ಬಳಿ ಬೈಕ್ಸವಾರ ನೆರೆ ನೀರಿನಲ್ಲೇ ರಸ್ತೆ ದಾಟಲು ಭಂಡ ಧೈರ್ಯ ತೋರಿದ್ದಾನೆ. ನೀರು ರಭಸವಾಗಿ ಹರಿಯುತ್ತಿದ್ದರಿಂದ ಸ್ಥಳೀಯರು ಕೂಡ ರಸ್ತೆ ದಾಟದಂತೆ ಬೈಕ್ ಸವಾರನಿಗೆ ಸೂಚಿಸಿದ್ದಾರೆ.
ಆದರೆ ಇದಕ್ಕೆ ತಲೆ ಕೆಡಿಸಿಕೊಳ್ಳದ ಬೈಕ್ ಸವಾರ ಭಂಡ ಧೈರ್ಯದಿಂದ ಬೈಕ್ ಚಲಾಯಿಸಿಕೊಂಡು ಬಂದಿದ್ದಾನೆ. ಸ್ವಲ್ಪ ದೂರ ತೆರಳುತ್ತಿದ್ದಂತೆ ನೀರಿನ ರಭಸಕ್ಕೆ ಬೈಕ್ ನಿಯಂತ್ರಣ ತಪ್ಪಿದೆ. ಕೂಡಲೇ ಸವಾರ ಬೈಕ್ ಸಮೇತ ಕೊಚ್ಚಿ ಹೋಗಿದ್ದಾನೆ. ಸ್ಥಳೀಯರು ಅವನನ್ನು ರಕ್ಷಿಸಿಲು ಮುಂದಾದರು. ಆದರೆ ನೀರಿನ ರಭಸ ಹೆಚ್ಚಿದ್ದರಿಂದ ಸಾಧ್ಯವಾಗಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.