
ಬೆಂಗಳೂರು(ಆ.31): ಎಲೆಕ್ಷನ್'ಗೂ ಮುನ್ನ ಜೆಡಿಎಸ್ ಮುಖಂಡ ವಿ.ಕೆ.ಗೋಪಾಲ್ ಬರ್ತ್ಡೇ ಪಾರ್ಟಿಯಲ್ಲಿ ಅಭಿಮಾನಿಗಳಿಂದ ಪುಷ್ಪಾರ್ಚನೆ ಮಾಡಿಸಿಕೊಂಡಿದ್ದಾರೆ. ಪುಷ್ಪಾರ್ಚನೆ ಮಾಡಿಸಿಕೊಂಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಜೆಡಿಎಸ್ ಘಟಕ ಅಧ್ಯಕ್ಷ ವಿ.ಕೆ.ಗೋಪಾಲ್ ಸಿಂಹಾಸನದ ಮೇಲೆ ಕೂತು, ಕಿರೀಟ ಧರಿಸಿ ಪುಷ್ಪಾರ್ಚನೆ ಮಾಡಿಸಿಕೊಂಡಿದ್ದಾರೆ. ಕತ್ರಿಗುಪ್ಪೆಯಲ್ಲಿ ಸಮಾವೇಶ ನಡೆದಿದ್ದು ಸಮಾವೇಶದಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೆಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸಹ ಭಾಗವಹಿಸಿದ್ದರು.
ಪದ್ಮನಾಭನಗರ ಕ್ಷೇತ್ರದ ಜೆಡಿಎಸ್ ಸಂಭವನೀಯ ಅಭ್ಯರ್ಥಿಯಾಗಿರುವ ಗೋಪಾಲ್ರಿಗೆ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಅದ್ಧೂರಿ ಸನ್ಮಾನ ಮಾಡಲಾಯ್ತು. ಅಭಿಮಾನಿಗಳಿಂದ ಪುಷ್ಪಾರ್ಚನೆ ಮಾಡಿಸಿಕೊಂಡಿರುವುದು ಈಗ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಅಲ್ಲದೆ, ಜೆಡಿಎಸ್ ನಾಯಕನ ವಿಲಾಸಿ ವೈಭೋಗಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.