ಸೇಲಂ, ಮಡಿಕೇರಿಗೆ ಫ್ಲೈ ಬಸ್ ಸಂಚಾರ ಆರಂಭ

Published : Jan 09, 2018, 10:49 AM ISTUpdated : Apr 11, 2018, 12:47 PM IST
ಸೇಲಂ, ಮಡಿಕೇರಿಗೆ ಫ್ಲೈ ಬಸ್ ಸಂಚಾರ ಆರಂಭ

ಸಾರಾಂಶ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೆಎಸ್ಸಾರ್ಟಿಸಿ ಸೇಲಂ, ಮಡಿಕೇರಿಗೆ ಆರಂಭಿಸಿರುವ ಮೂರು ಫ್ಲೈ ಬಸ್‌ಗಳನ್ನು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ಸೋಮವಾರ ಲೋಕಾರ್ಪಣೆಗೊಳಿಸಿದರು.

ಬೆಂಗಳೂರು (ಜ.09): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೆಎಸ್ಸಾರ್ಟಿಸಿ ಸೇಲಂ, ಮಡಿಕೇರಿಗೆ ಆರಂಭಿಸಿರುವ ಮೂರು ಫ್ಲೈ ಬಸ್‌ಗಳನ್ನು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ಸೋಮವಾರ ಲೋಕಾರ್ಪಣೆಗೊಳಿಸಿದರು.

ಶಾಂತಿನಗರ ಕೆಎಸ್‌ಆರ್‌ಟಿಸಿ ಕೇಂದ್ರೀಯ ವಿಭಾಗದ ಘಟಕ 4ರಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಬಸ್ ಸೇವೆ ಉದ್ಘಾಟಿಸಿ ಮಾತನಾಡಿದ ಅವರು, ಫ್ಲೈ ಬಸ್‌ಗಳಿಗೆ ಪ್ರಯಾಣಿಕರು ಹಾಗೂ ಸಾರ್ವಜನಿಕ ರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಈಗಾಗಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ಆರು ಹಾಗೂ ಕುಂದಾಪುರ ಮಾರ್ಗದಲ್ಲಿ ಎರಡು ಫ್ಲೈ ಬಸ್‌ಗಳು ಸೇವೆ ನೀಡುತ್ತಿವೆ. ಇದೀಗ ಅತ್ಯಾಧುನಿಕ ಸೌಲಭ್ಯ ಹೊಂದಿರುವ ಮೂರು ಫ್ಲೈ ಬಸ್‌ಗಳನ್ನು ಸೇವೆಗೆ ಮುಕ್ತಗೊಳಿಸಲಾಗಿದೆ. ಇರದಲ್ಲಿ ಎರಡು ಬಸ್ ಸೇಲಂಗೆ ಹಾಗೂ ಮತ್ತೊಂದು ಮಡಿಕೇರಿಗೆ ಸಂಚರಿಸಲಿದೆ ಎಂದು ಹೇಳಿದರು. ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಸ್. ಆರ್. ಉಮಾಶಂಕರ್, ಉಪಾಧ್ಯಕ್ಷ ಬಸವರಾಜು ಬುಳ್ಳಾ, ನಾಗರಾಜ್ ಯಾದವ್ ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?