10 ಸಾವಿರ ಕಾರ್ಯಕರ್ತರಿಗಾಗಿ ತಯಾರಾದ ಊಟ ರಾತ್ರೋ ರಾತ್ರಿ ನಾಪತ್ತೆ!

Published : Sep 05, 2017, 10:55 AM ISTUpdated : Apr 11, 2018, 12:42 PM IST
10 ಸಾವಿರ ಕಾರ್ಯಕರ್ತರಿಗಾಗಿ ತಯಾರಾದ ಊಟ ರಾತ್ರೋ ರಾತ್ರಿ ನಾಪತ್ತೆ!

ಸಾರಾಂಶ

ರಾಜ್ಯ ಬಿಜೆಪಿ ಹಮ್ಮಿಕೊಂಡಿರುವ ಮಂಗಳೂರು ಚಲೋ ರ್ಯಾಲಿಗೆ ಸಂಬಂಧಿಸಿದಂತೆ ಹಲವಾರು ಬೆಳವಣಿಗೆಗಳು ನಡೆಯುತ್ತಿವೆ. ಒಂದೆಡೆ ಕಾರ್ಯಕರ್ತರನ್ನು ಬಂಧಿಸುತ್ತಿದ್ದರೆ, ಮತ್ತೊಂದೆಡೆ ಭದ್ರತಾ ದೃಷ್ಟಿಯಿಂದ ಯಡಿಯೂರಪ್ಪರನ್ನು ಮನೆಯಿಂದ ಹೊರಬರದಂತೆ ಪೊಲೀಸರು ಸೂಚಿಸಿದ್ದಾರೆ. ಈ ಮಧ್ಯೆ ಬಿಜೆಪಿ ಕಾರ್ಯಕರ್ತರಿಗಾಗಿ ತಯಾರಿಸಿದ್ದ ಊಟವೇ ನಾಪತ್ತೆಯಾಗಿದೆ ಎಂಬ ಮಾಹಿತಿಯೂ ಲಭಿಸಿದೆ.

ಬೆಂಗಳೂರು(ಸೆ.05): ರಾಜ್ಯ ಬಿಜೆಪಿ ಹಮ್ಮಿಕೊಂಡಿರುವ ಮಂಗಳೂರು ಚಲೋ ರ್ಯಾಲಿಗೆ ಸಂಬಂಧಿಸಿದಂತೆ ಹಲವಾರು ಬೆಳವಣಿಗೆಗಳು ನಡೆಯುತ್ತಿವೆ. ಒಂದೆಡೆ ಕಾರ್ಯಕರ್ತರನ್ನು ಬಂಧಿಸುತ್ತಿದ್ದರೆ, ಮತ್ತೊಂದೆಡೆ ಭದ್ರತಾ ದೃಷ್ಟಿಯಿಂದ ಯಡಿಯೂರಪ್ಪರನ್ನು ಮನೆಯಿಂದ ಹೊರಬರದಂತೆ ಪೊಲೀಸರು ಸೂಚಿಸಿದ್ದಾರೆ. ಈ ಮಧ್ಯೆ ಬಿಜೆಪಿ ಕಾರ್ಯಕರ್ತರಿಗಾಗಿ ತಯಾರಿಸಿದ್ದ ಊಟವೇ ನಾಪತ್ತೆಯಾಗಿದೆ ಎಂಬ ಮಾಹಿತಿಯೂ ಲಭಿಸಿದೆ.

ಬಿಜೆಪಿ ರ್ಯಾಲಿ ಹಿನ್ನೆಲೆಯಲ್ಲಿ ಬೈಕ್ ರ್ಯಾಲಿಯಲ್ಲಿ ಪಾಲ್ಗೊಳ್ಳುವ ಕಾರ್ಯಕರ್ತರಿಗಾಗಿ ನೆಲಮಂಗಲದ ಗುಡೇಮಾರನಳ್ಳಿ ಬಳಿಯ ಸಮುದಾಯ ಭವನವೊಂದರಲ್ಲಿ ಊಟವನ್ನು ತಯಾರಿಸಲಾಗಿತ್ತು. ಆದರೀಗ ರಾತ್ರೋ ರಾತ್ರಿ ಈ ಊಟ ನಾಪತ್ತೆಯಾಗಿದೆ ಎಂಬ ಮಾಹಿತಿ ಲಭಿಸಿದೆ. ನಿನ್ನೆ ರಾತ್ರಿಯೇ ಈ ಪ್ರದೇಶದಲ್ಲಿದ್ದ ಕಾರ್ಯಕರ್ತರನ್ನು ಕುದೂರು ಪೊಲೀಸರು ತೆರವುಗೊಳಿಸಿ, ಬಳಿಕ ಕಾರ್ಯಕರ್ತರಿಗಾಗಿ ತಯಾರಿಸಿದ್ದ ಈ ಊಟವನ್ನು ಪೊಲೀಸರೇ ಅಲ್ಲಿಂದ ಸಾಗಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

10 ಸಾವಿರ ಕಾರ್ಯಕರ್ತರಿಗಾಗಿ ತಯಾರಾಗಿದ್ದ ಈ ಊಟ ನಾಪತ್ತೆಯಾಗಿರುವುದು ಬಹಳಷ್ಟು ಕುತೂಹಲ ಕೆರಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು: 2 ಲಕ್ಷ ಬೆಲೆಯ ಗಿಳಿ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ!
ವಿಮಾನದಲ್ಲಿ ಹೃದಯಾಘಾತ- ಅಮೆರಿಕ ಪ್ರಜೆಯ ಜೀವ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್