
ನವದೆಹಲಿ (ಆ.10): ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಜೆಪಿ ಪಾಳಯ ಸೇರಿದ ಬಳಿಕ ಮೊಟ್ಟ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿಯನ್ನು ನಾಳೆ ಭೇಟಿ ಮಾಡಲಿದ್ದಾರೆ. ನಾಳೆ ವೆಂಕಯ್ಯ ನಾಯ್ಡು ಉಪ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಲಿರುವ ಪ್ರಮಾಣ ವಚನ ಸಮಾರಂಭದಲ್ಲಿ ನಿತೀಶ್ ಕುಮಾರ್ ಭಾಗವಹಿಸಲಿದ್ದಾರೆ. ಹಾಗಾಗಿ ಇಂದೇ ದೆಹಲಿಗೆ ದೌಡಾಯಿಸಿದ್ದಾರೆ.
ಮೂಲಗಳ ಪ್ರಕಾರ ನಿತೀಶ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ ಅವರ ಅಪಾಯಿಂಟ್ ಮೆಂಟ್ ಕೇಳಿದ್ದಾರೆನ್ನಲಾಗಿದೆ. ಒಂದು ವೇಳೆ ಮೋದಿ ಅಪಾಯಿಂಟ್ ಮೆಂಟ್ ಸಿಕ್ಕರೆ ಬಿಹಾರದಲ್ಲಿ ಎನ್’ಡಿಎ ಸರ್ಕಾರ ರಚನೆಯಾದ ಬಳಿಕ ಇದು ನಿತೀಶ್ ಕುಮಾರ್ ಹಾಗೂ ನರೇಂದ್ರ ಮೋದಿ ಮೊದಲ ಭೇಟಿ ಇದಾಗಿರುತ್ತದೆ. ಭೇಟಿಯಲ್ಲಿ ಯಾವ ವಿಚಾರವನ್ನು ಚರ್ಚಿಸುತ್ತಾರೆ ಎಂಬುದು ಕುತೂಹಲಕಾರಿಯಾದ ವಿಚಾರವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.